News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ:  ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ: ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

Published : Aug 05, 2022, 10:32 PM IST

Congress Protest: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು

ನವದೆಹಲಿ (ಆ. 05):  ದೇಶಾದ್ಯಾಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಆದರೆ ರಾಷ್ಟ್ರರಾಜಧಾನಿ ಮಾತ್ರ ರಣರಂಗವಾಗಿ ಮಾರ್ಪಟ್ಟಿತ್ತು. ಮೋದಿ ಸರ್ಕಾರದ ವಿರುದ್ಧ ಘೋಷಣೆ, ಮಳೆಯಲ್ಲಿಯೇ ನಾಯಕರ ಧರಣಿ, ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಕಾಂಗ್ರೆಸ್ ಬ್ಲಾಕ್ ಫ್ರೈಡೇ ಪ್ರತಿಭಟನೆಯಲ್ಲಿ ಕಂಡು ಬಂದ ದೃಶ್ಯಗಳು ದೇಶದಲ್ಲಿನ ನಿರುದ್ಯೋಗ,  ಜಿಎಸ್‌ಟಿ ಹೇರಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರದ ವಿರುದ್ಧ ಸಿಡಿದೆದ್ದರು.  ಕಾಂಗ್ರೆಸ್ ನಾಯಕರೆಲ್ಲ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಗೆ ಇಳಿದಿದ್ದು ವಿಶೇಷ. ಅದರಲ್ಲೂ ಸದಾ ಬಿಳಿ ಪಂಜೆಯುಟ್ಟು ಓಡಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಕೂಡ ಕಪ್ಪು ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.

ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ದಿನದಂದೇ ಕಾಂಗ್ರೆಸ್‌ ಕಪ್ಪುಬಟ್ಟೆ ಧರಿಸಿದ್ದೇಕೆ?

ಇನ್ನು ಪ್ರತಿಭಟನೆಗೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ ಹಿಟ್ಲರ್ ಕೂಡ ಚುನಾವಣೆಯನ್ನು ಗೆದ್ದಿದ್ದ ಎನ್ನುವ ಮೂಲಕ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿಗೆ ಹೋಲಿಸಿದರು.  ಹರಿಯಾಣದಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಚಂಢಿಗಢದಲ್ಲಿ ನಡೆದ ಪ್ರೊಟೆಸ್ಟ್ ಹೈಡ್ರಾಮವೇ ನಡೆಯಿತು.

ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನ ಚದುರಿಸಿದ್ರು. ರಾಜಸ್ಥಾನ, ಒಡಿಶಾ, ಜಮ್ಮವಿನಲ್ಲೂ ಕಾಂಗ್ರೆಸ್ ಬೀದಿಗಿಳಿದು ಪ್ರೊಟೆಸ್ಟ್ ಮಾಡಿತು. ಮೋದಿ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more