News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ:  ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ: ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

Published : Aug 05, 2022, 10:32 PM IST

Congress Protest: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು

ನವದೆಹಲಿ (ಆ. 05):  ದೇಶಾದ್ಯಾಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಆದರೆ ರಾಷ್ಟ್ರರಾಜಧಾನಿ ಮಾತ್ರ ರಣರಂಗವಾಗಿ ಮಾರ್ಪಟ್ಟಿತ್ತು. ಮೋದಿ ಸರ್ಕಾರದ ವಿರುದ್ಧ ಘೋಷಣೆ, ಮಳೆಯಲ್ಲಿಯೇ ನಾಯಕರ ಧರಣಿ, ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಕಾಂಗ್ರೆಸ್ ಬ್ಲಾಕ್ ಫ್ರೈಡೇ ಪ್ರತಿಭಟನೆಯಲ್ಲಿ ಕಂಡು ಬಂದ ದೃಶ್ಯಗಳು ದೇಶದಲ್ಲಿನ ನಿರುದ್ಯೋಗ,  ಜಿಎಸ್‌ಟಿ ಹೇರಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರದ ವಿರುದ್ಧ ಸಿಡಿದೆದ್ದರು.  ಕಾಂಗ್ರೆಸ್ ನಾಯಕರೆಲ್ಲ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಗೆ ಇಳಿದಿದ್ದು ವಿಶೇಷ. ಅದರಲ್ಲೂ ಸದಾ ಬಿಳಿ ಪಂಜೆಯುಟ್ಟು ಓಡಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಕೂಡ ಕಪ್ಪು ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.

ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ದಿನದಂದೇ ಕಾಂಗ್ರೆಸ್‌ ಕಪ್ಪುಬಟ್ಟೆ ಧರಿಸಿದ್ದೇಕೆ?

ಇನ್ನು ಪ್ರತಿಭಟನೆಗೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ ಹಿಟ್ಲರ್ ಕೂಡ ಚುನಾವಣೆಯನ್ನು ಗೆದ್ದಿದ್ದ ಎನ್ನುವ ಮೂಲಕ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿಗೆ ಹೋಲಿಸಿದರು.  ಹರಿಯಾಣದಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಚಂಢಿಗಢದಲ್ಲಿ ನಡೆದ ಪ್ರೊಟೆಸ್ಟ್ ಹೈಡ್ರಾಮವೇ ನಡೆಯಿತು.

ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನ ಚದುರಿಸಿದ್ರು. ರಾಜಸ್ಥಾನ, ಒಡಿಶಾ, ಜಮ್ಮವಿನಲ್ಲೂ ಕಾಂಗ್ರೆಸ್ ಬೀದಿಗಿಳಿದು ಪ್ರೊಟೆಸ್ಟ್ ಮಾಡಿತು. ಮೋದಿ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more