News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ:  ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ: ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

Published : Aug 05, 2022, 10:32 PM IST

Congress Protest: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು

ನವದೆಹಲಿ (ಆ. 05):  ದೇಶಾದ್ಯಾಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಆದರೆ ರಾಷ್ಟ್ರರಾಜಧಾನಿ ಮಾತ್ರ ರಣರಂಗವಾಗಿ ಮಾರ್ಪಟ್ಟಿತ್ತು. ಮೋದಿ ಸರ್ಕಾರದ ವಿರುದ್ಧ ಘೋಷಣೆ, ಮಳೆಯಲ್ಲಿಯೇ ನಾಯಕರ ಧರಣಿ, ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಕಾಂಗ್ರೆಸ್ ಬ್ಲಾಕ್ ಫ್ರೈಡೇ ಪ್ರತಿಭಟನೆಯಲ್ಲಿ ಕಂಡು ಬಂದ ದೃಶ್ಯಗಳು ದೇಶದಲ್ಲಿನ ನಿರುದ್ಯೋಗ,  ಜಿಎಸ್‌ಟಿ ಹೇರಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರದ ವಿರುದ್ಧ ಸಿಡಿದೆದ್ದರು.  ಕಾಂಗ್ರೆಸ್ ನಾಯಕರೆಲ್ಲ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಗೆ ಇಳಿದಿದ್ದು ವಿಶೇಷ. ಅದರಲ್ಲೂ ಸದಾ ಬಿಳಿ ಪಂಜೆಯುಟ್ಟು ಓಡಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಕೂಡ ಕಪ್ಪು ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.

ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ದಿನದಂದೇ ಕಾಂಗ್ರೆಸ್‌ ಕಪ್ಪುಬಟ್ಟೆ ಧರಿಸಿದ್ದೇಕೆ?

ಇನ್ನು ಪ್ರತಿಭಟನೆಗೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ ಹಿಟ್ಲರ್ ಕೂಡ ಚುನಾವಣೆಯನ್ನು ಗೆದ್ದಿದ್ದ ಎನ್ನುವ ಮೂಲಕ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿಗೆ ಹೋಲಿಸಿದರು.  ಹರಿಯಾಣದಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಚಂಢಿಗಢದಲ್ಲಿ ನಡೆದ ಪ್ರೊಟೆಸ್ಟ್ ಹೈಡ್ರಾಮವೇ ನಡೆಯಿತು.

ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನ ಚದುರಿಸಿದ್ರು. ರಾಜಸ್ಥಾನ, ಒಡಿಶಾ, ಜಮ್ಮವಿನಲ್ಲೂ ಕಾಂಗ್ರೆಸ್ ಬೀದಿಗಿಳಿದು ಪ್ರೊಟೆಸ್ಟ್ ಮಾಡಿತು. ಮೋದಿ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more