ಆ.15ರ ಬಳಿಕ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ ಸಚಿವ ಅಶೋಕ್!

Aug 9, 2021, 11:08 PM IST

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್‌ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ