Gyanvapi case ಶಾಂತಿಯಿಂದ ಎಲ್ಲವನ್ನೂ ಒಪ್ಪಿಕೊಳ್ಳಿ, ಇದರಲ್ಲಿ ಸೋಲು-ಗೆಲುವಿನ ಪ್ರಶ್ನೆಯಿಲ್ಲ: ವಿಎಚ್‌ಪಿ

Gyanvapi case ಶಾಂತಿಯಿಂದ ಎಲ್ಲವನ್ನೂ ಒಪ್ಪಿಕೊಳ್ಳಿ, ಇದರಲ್ಲಿ ಸೋಲು-ಗೆಲುವಿನ ಪ್ರಶ್ನೆಯಿಲ್ಲ: ವಿಎಚ್‌ಪಿ

Published : Sep 12, 2022, 06:31 PM IST

ಜ್ಞಾನವಾಪಿ ಪ್ರಕರಣದಲ್ಲಿ ಅರ್ಜಿಯನ್ನು ವಿಚಾರಣೆಗೆ ಪುರಸ್ಕರಿಸಿರುವ ವಾರಣಾಸಿ ಕೋರ್ಟ್‌ನ ತೀರ್ಪನ್ನು ವಿಶ್ವ ಹಿಂದು ಪರಿಷತ್‌ ಸ್ವಾಗತಿಸಿದೆ. ದೇವಸ್ಥಾನವನ್ನು ಸ್ವತಂತ್ರ್ಯಗೊಳಿಸುವ ಮೊದಲ ಅಡ್ಡಿ ದೂರವಾಗಿದೆ. ತೀರ್ಪು ತೃಪ್ತಿ ತಂದಿದೆ ಎಂದಿದ್ದಾರೆ.

ನವದೆಹಲಿ (ಸೆ.12): ಜ್ಞಾನವಾಪಿ ಸುಂದರ್ ಶೃಂಗಾರ್ ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಇದನ್ನು ಗೆಲುವು ಅಥವಾ ಸೋಲು ಎಂದು ಪರಿಗಣಿಸುವ ಬದಲು ಎಲ್ಲರೂ ಶಾಂತವಾಗಿ ಸ್ವೀಕರಿಸಬೇಕು ಎಂದು ಹೇಳಿದ್ದಾರೆ.

“ವಾರಣಾಸಿ ದೇವಸ್ಥಾನದ ದಾರಿಯಲ್ಲಿ ಮೊದಲ ತಡೆಗೋಡೆ ದಾಟಿರುವುದರಿಂದ ಈ ನಿರ್ಧಾರವು ಮಹತ್ವದ್ದಾಗಿದೆ. ಈ ಪ್ರಕರಣದಲ್ಲಿ ಪೂಜಾ ಸ್ಥಳಗಳ ಕಾಯಿದೆಯನ್ನು ಅನ್ವಯಿಸುವುದಿಲ್ಲ ಎಂದು ನಮಗೆ ಮೊದಲೇ ತಿಳಿದಿತ್ತು ಮತ್ತು ಪ್ರಕರಣವನ್ನು ವಿಸ್ತರಿಸಲು ಮಾತ್ರ ಇದನ್ನು ಮಾಡಲಾಗಿದೆ. ಆದರೆ ನ್ಯಾಯಾಲಯ ಅದನ್ನು ಬದಿಗೊತ್ತಿದೆ,'' ಎಂದರು.

Gyanvapi ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್‌

“ಸತ್ಯಗಳ ಆಧಾರದ ಮೇಲೆ ಪ್ರಕರಣವನ್ನು ಆಲಿಸಲಾಗುವುದು ಮತ್ತು ನಾವು ಗೆಲ್ಲುತ್ತೇವೆ ಎಂದು ನಮಗೆ ಖಚಿತವಾಗಿದೆ. ಇದು ಧಾರ್ಮಿಕ ವಿಷಯ ಎಂದು ನಾನು ಒಪ್ಪಿಕೊಳ್ಳುತ್ತೇನೆ ಮತ್ತು ಪ್ರಕರಣವನ್ನು ಗೆಲುವು ಅಥವಾ ಸೋಲು ಎಂದು ಭಾವಿಸುವ ಬದಲು ಎಲ್ಲರೂ ಶಾಂತಿಯುತವಾಗಿ ಒಪ್ಪಿಕೊಳ್ಳಬೇಕು. ಶಿವನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಆಶಿಸುತ್ತೇನೆ ಎಂದು ಅವರು ಹೇಳಿದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!