ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

Published : Aug 12, 2020, 02:52 PM IST

ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ಬೆಂಗಳೂರು (ಆ. 12): ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ವಿಶ್ವಾದ್ಯಂತ ಕೊರೋನಾಗೆ ಲಸಿಕೆ ಅಭಿವೃದ್ಧಿಪಡಿಸುವ ಪ್ರಯತ್ನ 100ಕ್ಕೂ ಹೆಚ್ಚು ಕಡೆ ನಡೆಯುತ್ತಿದೆ. ಆ ಪೈಕಿ ಈಗಾಗಲೇ 6 ಲಸಿಕೆಗಳು ಮೂರನೇ ಹಂತದ ಕ್ಲಿನಿಕಲ್‌ ಟ್ರಯಲ್‌ ಹಂತ ತಲುಪಿವೆ. ಆದರೆ, ಅದರಲ್ಲಿ ರಷ್ಯಾ ಲಸಿಕೆಯೇ ಇರಲಿಲ್ಲ. ಆದಾಗ್ಯೂ ರಷ್ಯಾ ತಾನು ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಹೇಳಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಮೂರನೇ ಹಂತದ ಕ್ಲಿನಿಕಲ್‌ ಪರೀಕ್ಷೆಯನ್ನು ಸಹಸ್ರಾರು ಜನರ ಮೇಲೆ ನಡೆಸಬೇಕಾಗುತ್ತದೆ. ಒಂದು ವರದಿಯ ಪ್ರಕಾರ, 3ನೇ ಹಂತದ ಪ್ರಯೋಗ ರಷ್ಯಾದಲ್ಲಿ ಪೂರ್ಣವಾಗಿಲ್ಲ. ಅದನ್ನು ವಿವಿಧ ದೇಶಗಳಲ್ಲಿ ಮಾಡುವುದಾಗಿ ಹೇಳುತ್ತಿದೆ. ಹೀಗಾಗಿ ಈ ಲಸಿಕೆ ಬಗ್ಗೆ ಅಮೆರಿಕದಂತಹ ದೇಶಗಳು ಕಳವಳ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?