ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ;  ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ; ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

Published : Aug 19, 2025, 12:05 PM IST

ಉಪರಾಷ್ಟ್ರಪತಿ ಚುನಾವಣೆಗೆ NDAಯಿಂದ ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ ಕಣಕ್ಕಿಳಿದಿದ್ದಾರೆ. ಡಿಎಂಕೆಯಿಂದ ಸಂಸದ ತಿರುಚಿಶಿವ ಅವರ ಹೆಸರು ಪ್ರಸ್ತಾಪವಾಗಿದೆ.

ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ. ಅದ್ರಲ್ಲೂ ಡಿಎಂಕೆಗೆ ಚೆಕ್​​ಮೆಟ್​ ಇಟ್ಟಿದೆ. ಇತ್ತ ಇಂಡಿ ಒಕ್ಕೂಟ​ ಮಾತ್ರ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆಸಿದೆ.  ನಿನ್ನೆ ನಡೆದ ಸಭೆಯಲ್ಲಿ  ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಒಮ್ಮತಕ್ಕೆ ಬಂದಿಲ್ಲ. ಆದ್ರಿಂದ ಇಂದು ಮತ್ತೆ 12:30ಕ್ಕೆ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಮತ್ತೆ ಸಭೆ ಸೇರಲಿದ್ದಾರೆ.  ಇತ್ತ ಬಿಜೆಪಿ ಕೊಟ್ಟ ಸ್ಟ್ರೋಕ್​​ಗೆ ಡಿಎಂಕೆ ಮಾಸ್ಟ್ರರ್​ ಸ್ಟ್ರೋಕ್  ಕೊಡಲು ರಣತಂತ್ರ ರೂಪಿಸಿದೆ. ನಿನ್ನೆ ನಡೆದ ಸಭೆಯಲ್ಲಿ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಪ್ರಸ್ತಾಪವಾಗಿದೆ. ಆದ್ರೆ, ಟಿಎಂಸಿ ಮಾತ್ರ ಒಪ್ಪಿಗೆ ನೀಡಿಲ್ಲ ಎನ್ನಲಾಗ್ತಿದೆ. ಆದ್ರಿಂದ ಇಂದು ಮತ್ತೆ ಸಭೆ ನಡೆಸುವ ಮೂಲಕ ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಿಸಲಿದ್ದಾರೆ.  ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಲು ಸಂಸದರ ಬಲವಿಲ್ಲದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುತ್ತಿದ್ದಾರೆ. ಅದ್ರಲ್ಲೂ ತಮಿಳುನಾಡು ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ಡಿಎಂಕೆ ಮತ್ತು ಕಾಂಗ್ರೆಸ್  ಬಹುತೇಕ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಫೈನಲ್ ಮಾಡಲಿದೆಯಂತೆ. ಆದ್ರಿಂದ ಈ ಬಾರಿ  ಉಪರಾಷ್ಟ್ರಪತಿ ಎಲೆಕ್ಷನ್.. ತಮಿಳುನಾಡು V/S ತಮಿಳುನಾಡು ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more