ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ;  ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ; ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

Published : Aug 19, 2025, 12:05 PM IST

ಉಪರಾಷ್ಟ್ರಪತಿ ಚುನಾವಣೆಗೆ NDAಯಿಂದ ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ ಕಣಕ್ಕಿಳಿದಿದ್ದಾರೆ. ಡಿಎಂಕೆಯಿಂದ ಸಂಸದ ತಿರುಚಿಶಿವ ಅವರ ಹೆಸರು ಪ್ರಸ್ತಾಪವಾಗಿದೆ.

ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ. ಅದ್ರಲ್ಲೂ ಡಿಎಂಕೆಗೆ ಚೆಕ್​​ಮೆಟ್​ ಇಟ್ಟಿದೆ. ಇತ್ತ ಇಂಡಿ ಒಕ್ಕೂಟ​ ಮಾತ್ರ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆಸಿದೆ.  ನಿನ್ನೆ ನಡೆದ ಸಭೆಯಲ್ಲಿ  ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಒಮ್ಮತಕ್ಕೆ ಬಂದಿಲ್ಲ. ಆದ್ರಿಂದ ಇಂದು ಮತ್ತೆ 12:30ಕ್ಕೆ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಮತ್ತೆ ಸಭೆ ಸೇರಲಿದ್ದಾರೆ.  ಇತ್ತ ಬಿಜೆಪಿ ಕೊಟ್ಟ ಸ್ಟ್ರೋಕ್​​ಗೆ ಡಿಎಂಕೆ ಮಾಸ್ಟ್ರರ್​ ಸ್ಟ್ರೋಕ್  ಕೊಡಲು ರಣತಂತ್ರ ರೂಪಿಸಿದೆ. ನಿನ್ನೆ ನಡೆದ ಸಭೆಯಲ್ಲಿ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಪ್ರಸ್ತಾಪವಾಗಿದೆ. ಆದ್ರೆ, ಟಿಎಂಸಿ ಮಾತ್ರ ಒಪ್ಪಿಗೆ ನೀಡಿಲ್ಲ ಎನ್ನಲಾಗ್ತಿದೆ. ಆದ್ರಿಂದ ಇಂದು ಮತ್ತೆ ಸಭೆ ನಡೆಸುವ ಮೂಲಕ ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಿಸಲಿದ್ದಾರೆ.  ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಲು ಸಂಸದರ ಬಲವಿಲ್ಲದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುತ್ತಿದ್ದಾರೆ. ಅದ್ರಲ್ಲೂ ತಮಿಳುನಾಡು ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ಡಿಎಂಕೆ ಮತ್ತು ಕಾಂಗ್ರೆಸ್  ಬಹುತೇಕ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಫೈನಲ್ ಮಾಡಲಿದೆಯಂತೆ. ಆದ್ರಿಂದ ಈ ಬಾರಿ  ಉಪರಾಷ್ಟ್ರಪತಿ ಎಲೆಕ್ಷನ್.. ತಮಿಳುನಾಡು V/S ತಮಿಳುನಾಡು ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. 

 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more