ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ;  ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ; ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

Published : Aug 19, 2025, 12:05 PM IST

ಉಪರಾಷ್ಟ್ರಪತಿ ಚುನಾವಣೆಗೆ NDAಯಿಂದ ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ ಕಣಕ್ಕಿಳಿದಿದ್ದಾರೆ. ಡಿಎಂಕೆಯಿಂದ ಸಂಸದ ತಿರುಚಿಶಿವ ಅವರ ಹೆಸರು ಪ್ರಸ್ತಾಪವಾಗಿದೆ.

ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ. ಅದ್ರಲ್ಲೂ ಡಿಎಂಕೆಗೆ ಚೆಕ್​​ಮೆಟ್​ ಇಟ್ಟಿದೆ. ಇತ್ತ ಇಂಡಿ ಒಕ್ಕೂಟ​ ಮಾತ್ರ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆಸಿದೆ.  ನಿನ್ನೆ ನಡೆದ ಸಭೆಯಲ್ಲಿ  ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಒಮ್ಮತಕ್ಕೆ ಬಂದಿಲ್ಲ. ಆದ್ರಿಂದ ಇಂದು ಮತ್ತೆ 12:30ಕ್ಕೆ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಮತ್ತೆ ಸಭೆ ಸೇರಲಿದ್ದಾರೆ.  ಇತ್ತ ಬಿಜೆಪಿ ಕೊಟ್ಟ ಸ್ಟ್ರೋಕ್​​ಗೆ ಡಿಎಂಕೆ ಮಾಸ್ಟ್ರರ್​ ಸ್ಟ್ರೋಕ್  ಕೊಡಲು ರಣತಂತ್ರ ರೂಪಿಸಿದೆ. ನಿನ್ನೆ ನಡೆದ ಸಭೆಯಲ್ಲಿ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಪ್ರಸ್ತಾಪವಾಗಿದೆ. ಆದ್ರೆ, ಟಿಎಂಸಿ ಮಾತ್ರ ಒಪ್ಪಿಗೆ ನೀಡಿಲ್ಲ ಎನ್ನಲಾಗ್ತಿದೆ. ಆದ್ರಿಂದ ಇಂದು ಮತ್ತೆ ಸಭೆ ನಡೆಸುವ ಮೂಲಕ ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಿಸಲಿದ್ದಾರೆ.  ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಲು ಸಂಸದರ ಬಲವಿಲ್ಲದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುತ್ತಿದ್ದಾರೆ. ಅದ್ರಲ್ಲೂ ತಮಿಳುನಾಡು ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ಡಿಎಂಕೆ ಮತ್ತು ಕಾಂಗ್ರೆಸ್  ಬಹುತೇಕ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಫೈನಲ್ ಮಾಡಲಿದೆಯಂತೆ. ಆದ್ರಿಂದ ಈ ಬಾರಿ  ಉಪರಾಷ್ಟ್ರಪತಿ ಎಲೆಕ್ಷನ್.. ತಮಿಳುನಾಡು V/S ತಮಿಳುನಾಡು ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. 

 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more