ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ;  ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ; ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

Published : Aug 19, 2025, 12:05 PM IST

ಉಪರಾಷ್ಟ್ರಪತಿ ಚುನಾವಣೆಗೆ NDAಯಿಂದ ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ ಕಣಕ್ಕಿಳಿದಿದ್ದಾರೆ. ಡಿಎಂಕೆಯಿಂದ ಸಂಸದ ತಿರುಚಿಶಿವ ಅವರ ಹೆಸರು ಪ್ರಸ್ತಾಪವಾಗಿದೆ.

ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ. ಅದ್ರಲ್ಲೂ ಡಿಎಂಕೆಗೆ ಚೆಕ್​​ಮೆಟ್​ ಇಟ್ಟಿದೆ. ಇತ್ತ ಇಂಡಿ ಒಕ್ಕೂಟ​ ಮಾತ್ರ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆಸಿದೆ.  ನಿನ್ನೆ ನಡೆದ ಸಭೆಯಲ್ಲಿ  ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಒಮ್ಮತಕ್ಕೆ ಬಂದಿಲ್ಲ. ಆದ್ರಿಂದ ಇಂದು ಮತ್ತೆ 12:30ಕ್ಕೆ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಮತ್ತೆ ಸಭೆ ಸೇರಲಿದ್ದಾರೆ.  ಇತ್ತ ಬಿಜೆಪಿ ಕೊಟ್ಟ ಸ್ಟ್ರೋಕ್​​ಗೆ ಡಿಎಂಕೆ ಮಾಸ್ಟ್ರರ್​ ಸ್ಟ್ರೋಕ್  ಕೊಡಲು ರಣತಂತ್ರ ರೂಪಿಸಿದೆ. ನಿನ್ನೆ ನಡೆದ ಸಭೆಯಲ್ಲಿ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಪ್ರಸ್ತಾಪವಾಗಿದೆ. ಆದ್ರೆ, ಟಿಎಂಸಿ ಮಾತ್ರ ಒಪ್ಪಿಗೆ ನೀಡಿಲ್ಲ ಎನ್ನಲಾಗ್ತಿದೆ. ಆದ್ರಿಂದ ಇಂದು ಮತ್ತೆ ಸಭೆ ನಡೆಸುವ ಮೂಲಕ ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಿಸಲಿದ್ದಾರೆ.  ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಲು ಸಂಸದರ ಬಲವಿಲ್ಲದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುತ್ತಿದ್ದಾರೆ. ಅದ್ರಲ್ಲೂ ತಮಿಳುನಾಡು ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ಡಿಎಂಕೆ ಮತ್ತು ಕಾಂಗ್ರೆಸ್  ಬಹುತೇಕ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಫೈನಲ್ ಮಾಡಲಿದೆಯಂತೆ. ಆದ್ರಿಂದ ಈ ಬಾರಿ  ಉಪರಾಷ್ಟ್ರಪತಿ ಎಲೆಕ್ಷನ್.. ತಮಿಳುನಾಡು V/S ತಮಿಳುನಾಡು ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. 

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more