ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

Published : Sep 22, 2023, 12:57 PM IST

ಕ್ರಿಕೆಟ್ ಕಾಶಿ ಅಂದ್ರೆ ಥಟ್ಟನೇ ನೆನಪಾಗೋದು ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣ. ಇದೀಗ ಭಾರತದಲ್ಲೇ ‘ಕ್ರಿಕೆಟ್ ಕಾಶಿ’ ನಿರ್ಮಾಣವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ರೆಡಿಯಾಗಿದೆ. ಶಿವನಗರದಲ್ಲಿ ನಿರ್ಮಾಣವಾಗಲಿರುವ ಈ ಸ್ಟೇಡಿಯಂನ ವಿಶೇಷತೆ ಏನಂದ್ರೆ, ಭಗವಾನ್ ಶಿವನ ಪ್ರೇರಿತ ಥೀಮ್ನಿಂದ ಕೂಡಿದೆ.
 

ಶಿವನ ತಲೆ ಮೇಲಿರುವ ಅರ್ಧಚಂದ್ರಾಕೃತಿಯಂತೆ ಮೇಲ್ಛಾವಣೆ ನಿರ್ಮಿಸಲಾಗಿದೆ. ಫ್ಲಡ್ಲೈಟ್ಗಳನ್ನ ದೊಡ್ಡ ತ್ರಿಶೂಲದ ಆಕೃತಿಯ ಕಂಬಗಳಲ್ಲಿ ಅಳವಡಿಸಲಾಗಿದೆ. ಪೆವಿಲಿಯನ್ ಮತ್ತು ವಿಐಪಿ ಲಾಂಜ್ಗಳ ಗುಮ್ಮಟವು ಢಮರುಗ ರೀತಿ ಮಾಡಲಾಗಿದೆ. ಇನ್ನು ಗ್ಯಾಲರಿಯ ಆಸನ ವ್ಯವಸ್ಥೆಯನ್ನು ಕಾಶಿ ಘಾಟ್ಗಳ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಸ್ಟೇಡಿಯಂನ ಗೇಟುಗಳು ಬಿಲ್ವ ಪತ್ರೆಯ ರೀತಿಯಲ್ಲಿವೆ. ಇನ್ನು ಈ ಕ್ರೀಡಾಂಗಣ 32 ಎಕರೆಯಲ್ಲಿ ನಿರ್ಮಿಸಲಾಗುತ್ತಿದೆ. ಹೊಸ ಸ್ಟೇಡಿಯಂ 400 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸುಮಾರು 40 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಈ ಸ್ಟೇಡಿಯಂಗೆ ಇದೆ. ಪ್ರಧಾನಿ ಮೋದಿ(Narendra Modi) ನಾಡಿದ್ದು ಕ್ರೀಡಾಂಗಣದ ಶಿಲಾನ್ಯಾಸ ಮಾಡಲಿದ್ದಾರೆ. ಇದು ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರಾಣಸಿ(Varanasi) ಸಮೀಪದ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಷಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ, ದಿಗ್ಗಜರಾದ ಕಪಿಲ್ ದೇವ್, ಸುನೀಲ್ ಗಾವಸ್ಕರ್, ಸಚಿನ್ ತೆಂಡುಲ್ಕರ್, ಸಮಾರಂಭದಲ್ಲಿ ಹಾಜರಿರಲಿದ್ದಾರೆ. 1983ರ ವಿಶ್ವಕಪ್ ವಿಜೇತ ತಂಡದ ಇತರ ಸದಸ್ಯರಾದ ದಿಲೀಪ್ ವೆಂಗ್ಸರ್ಕಾರ್, ರವಿಶಾಸ್ತ್ರಿ, ಮದನ್ ಲಾಲ್ ಜತೆಗೆ ಕನ್ನಡಿಗ ಜಿಆರ್ ವಿಶ್ವನಾಥ್ ಕೂಡ ಉಪಸ್ಥಿತರಿರಲಿದ್ದಾರೆ. 

ಇದನ್ನೂ ವೀಕ್ಷಿಸಿ:  150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more