ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

Published : Sep 22, 2023, 12:57 PM IST

ಕ್ರಿಕೆಟ್ ಕಾಶಿ ಅಂದ್ರೆ ಥಟ್ಟನೇ ನೆನಪಾಗೋದು ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣ. ಇದೀಗ ಭಾರತದಲ್ಲೇ ‘ಕ್ರಿಕೆಟ್ ಕಾಶಿ’ ನಿರ್ಮಾಣವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ರೆಡಿಯಾಗಿದೆ. ಶಿವನಗರದಲ್ಲಿ ನಿರ್ಮಾಣವಾಗಲಿರುವ ಈ ಸ್ಟೇಡಿಯಂನ ವಿಶೇಷತೆ ಏನಂದ್ರೆ, ಭಗವಾನ್ ಶಿವನ ಪ್ರೇರಿತ ಥೀಮ್ನಿಂದ ಕೂಡಿದೆ.
 

ಶಿವನ ತಲೆ ಮೇಲಿರುವ ಅರ್ಧಚಂದ್ರಾಕೃತಿಯಂತೆ ಮೇಲ್ಛಾವಣೆ ನಿರ್ಮಿಸಲಾಗಿದೆ. ಫ್ಲಡ್ಲೈಟ್ಗಳನ್ನ ದೊಡ್ಡ ತ್ರಿಶೂಲದ ಆಕೃತಿಯ ಕಂಬಗಳಲ್ಲಿ ಅಳವಡಿಸಲಾಗಿದೆ. ಪೆವಿಲಿಯನ್ ಮತ್ತು ವಿಐಪಿ ಲಾಂಜ್ಗಳ ಗುಮ್ಮಟವು ಢಮರುಗ ರೀತಿ ಮಾಡಲಾಗಿದೆ. ಇನ್ನು ಗ್ಯಾಲರಿಯ ಆಸನ ವ್ಯವಸ್ಥೆಯನ್ನು ಕಾಶಿ ಘಾಟ್ಗಳ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಸ್ಟೇಡಿಯಂನ ಗೇಟುಗಳು ಬಿಲ್ವ ಪತ್ರೆಯ ರೀತಿಯಲ್ಲಿವೆ. ಇನ್ನು ಈ ಕ್ರೀಡಾಂಗಣ 32 ಎಕರೆಯಲ್ಲಿ ನಿರ್ಮಿಸಲಾಗುತ್ತಿದೆ. ಹೊಸ ಸ್ಟೇಡಿಯಂ 400 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸುಮಾರು 40 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಈ ಸ್ಟೇಡಿಯಂಗೆ ಇದೆ. ಪ್ರಧಾನಿ ಮೋದಿ(Narendra Modi) ನಾಡಿದ್ದು ಕ್ರೀಡಾಂಗಣದ ಶಿಲಾನ್ಯಾಸ ಮಾಡಲಿದ್ದಾರೆ. ಇದು ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರಾಣಸಿ(Varanasi) ಸಮೀಪದ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಷಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ, ದಿಗ್ಗಜರಾದ ಕಪಿಲ್ ದೇವ್, ಸುನೀಲ್ ಗಾವಸ್ಕರ್, ಸಚಿನ್ ತೆಂಡುಲ್ಕರ್, ಸಮಾರಂಭದಲ್ಲಿ ಹಾಜರಿರಲಿದ್ದಾರೆ. 1983ರ ವಿಶ್ವಕಪ್ ವಿಜೇತ ತಂಡದ ಇತರ ಸದಸ್ಯರಾದ ದಿಲೀಪ್ ವೆಂಗ್ಸರ್ಕಾರ್, ರವಿಶಾಸ್ತ್ರಿ, ಮದನ್ ಲಾಲ್ ಜತೆಗೆ ಕನ್ನಡಿಗ ಜಿಆರ್ ವಿಶ್ವನಾಥ್ ಕೂಡ ಉಪಸ್ಥಿತರಿರಲಿದ್ದಾರೆ. 

ಇದನ್ನೂ ವೀಕ್ಷಿಸಿ:  150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more