ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

Published : Sep 22, 2023, 12:57 PM IST

ಕ್ರಿಕೆಟ್ ಕಾಶಿ ಅಂದ್ರೆ ಥಟ್ಟನೇ ನೆನಪಾಗೋದು ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣ. ಇದೀಗ ಭಾರತದಲ್ಲೇ ‘ಕ್ರಿಕೆಟ್ ಕಾಶಿ’ ನಿರ್ಮಾಣವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ರೆಡಿಯಾಗಿದೆ. ಶಿವನಗರದಲ್ಲಿ ನಿರ್ಮಾಣವಾಗಲಿರುವ ಈ ಸ್ಟೇಡಿಯಂನ ವಿಶೇಷತೆ ಏನಂದ್ರೆ, ಭಗವಾನ್ ಶಿವನ ಪ್ರೇರಿತ ಥೀಮ್ನಿಂದ ಕೂಡಿದೆ.
 

ಶಿವನ ತಲೆ ಮೇಲಿರುವ ಅರ್ಧಚಂದ್ರಾಕೃತಿಯಂತೆ ಮೇಲ್ಛಾವಣೆ ನಿರ್ಮಿಸಲಾಗಿದೆ. ಫ್ಲಡ್ಲೈಟ್ಗಳನ್ನ ದೊಡ್ಡ ತ್ರಿಶೂಲದ ಆಕೃತಿಯ ಕಂಬಗಳಲ್ಲಿ ಅಳವಡಿಸಲಾಗಿದೆ. ಪೆವಿಲಿಯನ್ ಮತ್ತು ವಿಐಪಿ ಲಾಂಜ್ಗಳ ಗುಮ್ಮಟವು ಢಮರುಗ ರೀತಿ ಮಾಡಲಾಗಿದೆ. ಇನ್ನು ಗ್ಯಾಲರಿಯ ಆಸನ ವ್ಯವಸ್ಥೆಯನ್ನು ಕಾಶಿ ಘಾಟ್ಗಳ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಸ್ಟೇಡಿಯಂನ ಗೇಟುಗಳು ಬಿಲ್ವ ಪತ್ರೆಯ ರೀತಿಯಲ್ಲಿವೆ. ಇನ್ನು ಈ ಕ್ರೀಡಾಂಗಣ 32 ಎಕರೆಯಲ್ಲಿ ನಿರ್ಮಿಸಲಾಗುತ್ತಿದೆ. ಹೊಸ ಸ್ಟೇಡಿಯಂ 400 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸುಮಾರು 40 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಈ ಸ್ಟೇಡಿಯಂಗೆ ಇದೆ. ಪ್ರಧಾನಿ ಮೋದಿ(Narendra Modi) ನಾಡಿದ್ದು ಕ್ರೀಡಾಂಗಣದ ಶಿಲಾನ್ಯಾಸ ಮಾಡಲಿದ್ದಾರೆ. ಇದು ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರಾಣಸಿ(Varanasi) ಸಮೀಪದ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಷಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ, ದಿಗ್ಗಜರಾದ ಕಪಿಲ್ ದೇವ್, ಸುನೀಲ್ ಗಾವಸ್ಕರ್, ಸಚಿನ್ ತೆಂಡುಲ್ಕರ್, ಸಮಾರಂಭದಲ್ಲಿ ಹಾಜರಿರಲಿದ್ದಾರೆ. 1983ರ ವಿಶ್ವಕಪ್ ವಿಜೇತ ತಂಡದ ಇತರ ಸದಸ್ಯರಾದ ದಿಲೀಪ್ ವೆಂಗ್ಸರ್ಕಾರ್, ರವಿಶಾಸ್ತ್ರಿ, ಮದನ್ ಲಾಲ್ ಜತೆಗೆ ಕನ್ನಡಿಗ ಜಿಆರ್ ವಿಶ್ವನಾಥ್ ಕೂಡ ಉಪಸ್ಥಿತರಿರಲಿದ್ದಾರೆ. 

ಇದನ್ನೂ ವೀಕ್ಷಿಸಿ:  150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more