ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

Published : Sep 22, 2023, 12:57 PM IST

ಕ್ರಿಕೆಟ್ ಕಾಶಿ ಅಂದ್ರೆ ಥಟ್ಟನೇ ನೆನಪಾಗೋದು ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣ. ಇದೀಗ ಭಾರತದಲ್ಲೇ ‘ಕ್ರಿಕೆಟ್ ಕಾಶಿ’ ನಿರ್ಮಾಣವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ರೆಡಿಯಾಗಿದೆ. ಶಿವನಗರದಲ್ಲಿ ನಿರ್ಮಾಣವಾಗಲಿರುವ ಈ ಸ್ಟೇಡಿಯಂನ ವಿಶೇಷತೆ ಏನಂದ್ರೆ, ಭಗವಾನ್ ಶಿವನ ಪ್ರೇರಿತ ಥೀಮ್ನಿಂದ ಕೂಡಿದೆ.
 

ಶಿವನ ತಲೆ ಮೇಲಿರುವ ಅರ್ಧಚಂದ್ರಾಕೃತಿಯಂತೆ ಮೇಲ್ಛಾವಣೆ ನಿರ್ಮಿಸಲಾಗಿದೆ. ಫ್ಲಡ್ಲೈಟ್ಗಳನ್ನ ದೊಡ್ಡ ತ್ರಿಶೂಲದ ಆಕೃತಿಯ ಕಂಬಗಳಲ್ಲಿ ಅಳವಡಿಸಲಾಗಿದೆ. ಪೆವಿಲಿಯನ್ ಮತ್ತು ವಿಐಪಿ ಲಾಂಜ್ಗಳ ಗುಮ್ಮಟವು ಢಮರುಗ ರೀತಿ ಮಾಡಲಾಗಿದೆ. ಇನ್ನು ಗ್ಯಾಲರಿಯ ಆಸನ ವ್ಯವಸ್ಥೆಯನ್ನು ಕಾಶಿ ಘಾಟ್ಗಳ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಸ್ಟೇಡಿಯಂನ ಗೇಟುಗಳು ಬಿಲ್ವ ಪತ್ರೆಯ ರೀತಿಯಲ್ಲಿವೆ. ಇನ್ನು ಈ ಕ್ರೀಡಾಂಗಣ 32 ಎಕರೆಯಲ್ಲಿ ನಿರ್ಮಿಸಲಾಗುತ್ತಿದೆ. ಹೊಸ ಸ್ಟೇಡಿಯಂ 400 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸುಮಾರು 40 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಈ ಸ್ಟೇಡಿಯಂಗೆ ಇದೆ. ಪ್ರಧಾನಿ ಮೋದಿ(Narendra Modi) ನಾಡಿದ್ದು ಕ್ರೀಡಾಂಗಣದ ಶಿಲಾನ್ಯಾಸ ಮಾಡಲಿದ್ದಾರೆ. ಇದು ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರಾಣಸಿ(Varanasi) ಸಮೀಪದ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಷಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ, ದಿಗ್ಗಜರಾದ ಕಪಿಲ್ ದೇವ್, ಸುನೀಲ್ ಗಾವಸ್ಕರ್, ಸಚಿನ್ ತೆಂಡುಲ್ಕರ್, ಸಮಾರಂಭದಲ್ಲಿ ಹಾಜರಿರಲಿದ್ದಾರೆ. 1983ರ ವಿಶ್ವಕಪ್ ವಿಜೇತ ತಂಡದ ಇತರ ಸದಸ್ಯರಾದ ದಿಲೀಪ್ ವೆಂಗ್ಸರ್ಕಾರ್, ರವಿಶಾಸ್ತ್ರಿ, ಮದನ್ ಲಾಲ್ ಜತೆಗೆ ಕನ್ನಡಿಗ ಜಿಆರ್ ವಿಶ್ವನಾಥ್ ಕೂಡ ಉಪಸ್ಥಿತರಿರಲಿದ್ದಾರೆ. 

ಇದನ್ನೂ ವೀಕ್ಷಿಸಿ:  150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more