ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

Published : Sep 22, 2023, 12:57 PM IST

ಕ್ರಿಕೆಟ್ ಕಾಶಿ ಅಂದ್ರೆ ಥಟ್ಟನೇ ನೆನಪಾಗೋದು ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣ. ಇದೀಗ ಭಾರತದಲ್ಲೇ ‘ಕ್ರಿಕೆಟ್ ಕಾಶಿ’ ನಿರ್ಮಾಣವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ರೆಡಿಯಾಗಿದೆ. ಶಿವನಗರದಲ್ಲಿ ನಿರ್ಮಾಣವಾಗಲಿರುವ ಈ ಸ್ಟೇಡಿಯಂನ ವಿಶೇಷತೆ ಏನಂದ್ರೆ, ಭಗವಾನ್ ಶಿವನ ಪ್ರೇರಿತ ಥೀಮ್ನಿಂದ ಕೂಡಿದೆ.
 

ಶಿವನ ತಲೆ ಮೇಲಿರುವ ಅರ್ಧಚಂದ್ರಾಕೃತಿಯಂತೆ ಮೇಲ್ಛಾವಣೆ ನಿರ್ಮಿಸಲಾಗಿದೆ. ಫ್ಲಡ್ಲೈಟ್ಗಳನ್ನ ದೊಡ್ಡ ತ್ರಿಶೂಲದ ಆಕೃತಿಯ ಕಂಬಗಳಲ್ಲಿ ಅಳವಡಿಸಲಾಗಿದೆ. ಪೆವಿಲಿಯನ್ ಮತ್ತು ವಿಐಪಿ ಲಾಂಜ್ಗಳ ಗುಮ್ಮಟವು ಢಮರುಗ ರೀತಿ ಮಾಡಲಾಗಿದೆ. ಇನ್ನು ಗ್ಯಾಲರಿಯ ಆಸನ ವ್ಯವಸ್ಥೆಯನ್ನು ಕಾಶಿ ಘಾಟ್ಗಳ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಸ್ಟೇಡಿಯಂನ ಗೇಟುಗಳು ಬಿಲ್ವ ಪತ್ರೆಯ ರೀತಿಯಲ್ಲಿವೆ. ಇನ್ನು ಈ ಕ್ರೀಡಾಂಗಣ 32 ಎಕರೆಯಲ್ಲಿ ನಿರ್ಮಿಸಲಾಗುತ್ತಿದೆ. ಹೊಸ ಸ್ಟೇಡಿಯಂ 400 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸುಮಾರು 40 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಈ ಸ್ಟೇಡಿಯಂಗೆ ಇದೆ. ಪ್ರಧಾನಿ ಮೋದಿ(Narendra Modi) ನಾಡಿದ್ದು ಕ್ರೀಡಾಂಗಣದ ಶಿಲಾನ್ಯಾಸ ಮಾಡಲಿದ್ದಾರೆ. ಇದು ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರಾಣಸಿ(Varanasi) ಸಮೀಪದ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಷಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ, ದಿಗ್ಗಜರಾದ ಕಪಿಲ್ ದೇವ್, ಸುನೀಲ್ ಗಾವಸ್ಕರ್, ಸಚಿನ್ ತೆಂಡುಲ್ಕರ್, ಸಮಾರಂಭದಲ್ಲಿ ಹಾಜರಿರಲಿದ್ದಾರೆ. 1983ರ ವಿಶ್ವಕಪ್ ವಿಜೇತ ತಂಡದ ಇತರ ಸದಸ್ಯರಾದ ದಿಲೀಪ್ ವೆಂಗ್ಸರ್ಕಾರ್, ರವಿಶಾಸ್ತ್ರಿ, ಮದನ್ ಲಾಲ್ ಜತೆಗೆ ಕನ್ನಡಿಗ ಜಿಆರ್ ವಿಶ್ವನಾಥ್ ಕೂಡ ಉಪಸ್ಥಿತರಿರಲಿದ್ದಾರೆ. 

ಇದನ್ನೂ ವೀಕ್ಷಿಸಿ:  150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more