'ಅಸಾನಿ' ಅಬ್ಬರ, ಆಂಧ್ರ ಕರಾವಳಿಯಲ್ಲಿ ಪತ್ತೆಯಾಯ್ತು 'ಚಿನ್ನದ' ರಥ, ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!

'ಅಸಾನಿ' ಅಬ್ಬರ, ಆಂಧ್ರ ಕರಾವಳಿಯಲ್ಲಿ ಪತ್ತೆಯಾಯ್ತು 'ಚಿನ್ನದ' ರಥ, ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!

Published : May 11, 2022, 09:08 AM IST

ಆಸಾನಿ ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಅಲೆಗಳ ನರ್ತನ ಆರಂಭವಾಗಿದೆ. ಹೀಗಿರುವಾಗ ಆಂಧ್ರ ಪ್ರದೇಶದ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದ ಮಾದರಿಯೊಂದು ತೇಲಿ ಬಂದಿದ್ದು, ಇದನ್ನು ನೋಡಲು ಜನರು ಕರಾವಳಿ ಪ್ರದೇಶದತ್ತ ಧಾವಿಸುತ್ತಿದ್ದಾರೆ. 

ಅಮರಾವತಿ(ಮೇ.11): ಮಂಗಳವಾರ ಸಂಜೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದಂತಹ ಮಾದರಿಯು ಪತತ್ತೆಯಾಗಿದೆ. ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥೈಲ್ಯಾಂಡ್‌ನಿಂದ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮಸ್ಥರು ಹಗ್ಗಗಳ ಸಹಾಯದಿಂದ ಇದನ್ನು ದಡಕ್ಕೆ ಎಳೆದಿದ್ದಾರೆ.

ರಥವು ಆಗ್ನೇಯ ಏಷ್ಯಾದ ದೇಶಗಳ ಮಠದ ಆಕಾರವನ್ನು ಹೋಲುತ್ತದೆ. ಆಸಾನಿ ಚಂಡಮಾರುತದ ಪ್ರಭಾವದಿಂದ ರಥವು ಆಂಧ್ರಪ್ರದೇಶ ಕರಾವಳಿಗೆ ತೇಲಿ ಬಂದಿದೆ ಎಂದು ಶಂಕಿಸಲಾಗಿದೆ. ಸ್ಥಳೀಯ ನಾವಿಕರ ಪ್ರಕಾರ, ಚಂಡಮಾರುತದ ಪ್ರಭಾವದಿಂದ ಉಂಟಾದ ಅಲೆಗಳ ಅಬ್ಬರದ ಕಾರಣ ರಥವು ಕರಾವಳಿಗೆ ಕೊಚ್ಚಿ ಬಂದಿರಬಹುದೆಂದಿದ್ದಾರೆ. ಚಿನ್ನದ ರಥದ ದರ್ಶನ ಪಡೆಯಲು ಅಕ್ಕಪಕ್ಕದ ಗ್ರಾಮಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ದಡದತ್ತ ಆಗಮಿಸಲಾರಂಭಿಸಿದ್ದಾರೆ. 

ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಮೊದಲ ಬಾರಿ ಒತ್ತಡ ರೂಪುಗೊಂಡಿದ್ದರಿಂದ, ಮ್ಯಾನ್ಮಾರ್, ಥೈಲ್ಯಾಂಡ್, ಮಲೇಷ್ಯಾ ಅಥವಾ ಇಂಡೋನೇಷ್ಯಾದಂತಹ ಅಂಡಮಾನ್ ಸಮುದ್ರಕ್ಕೆ ಹತ್ತಿರವಿರುವ ದೇಶದಿಂದ ಅಲೆಗಳ ರಭಸಕ್ಕೆ ರಥವನ್ನು ಬಂದಿರಬಹುದು. ಸಂತೆಬೊಮ್ಮಾಳಿ ತಹಸೀಲ್ದಾರ್ ಜೆ.ಚಲಮಯ್ಯ ಅವರನ್ನು ಸಂಪರ್ಕಿಸಿದಾಗ, ಯಾವುದೇ ದೇಶದಿಂದ ಬಂದಿರದಿರಬಹುದು. "ಭಾರತೀಯ ಕರಾವಳಿಯಲ್ಲಿ ಎಲ್ಲೋ ಕೆಲವು ಚಲನಚಿತ್ರಗಳ ಚಿತ್ರೀಕರಣಕ್ಕಾಗಿ ರಥವನ್ನು ಬಳಸಲಾಗಿದೆ ಮತ್ತು ಹೆಚ್ಚಿನ ಉಬ್ಬರವಿಳಿತದ ಚಟುವಟಿಕೆಯು ಶ್ರೀಕಾಕುಲಂ ತೀರಕ್ಕೆ ತಂದಿರಬಹುದು ಎಂಬುವುದು ನಮ್ಮ ಅಂದಾಜು" ಎಂದು ಅವರು ಹೇಳಿದರು.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more