News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

Published : Mar 22, 2024, 11:14 PM IST


ಅಕ್ರಮ ಮದ್ಯನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ರೋಸ್‌ ಅವೆನ್ಯು ಕೋರ್ಟ್‌ 7 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ. ಮಾರ್ಚ್‌ 28ರವರೆಗೆ ಅವರು ಇಡಿ ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಲಿದ್ದಾರೆ.

ನವದೆಹಲಿ (ಮಾ.22): ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಕಾಂಗ್ರೆಸ್‌ ಪಕ್ಷ ಪ್ರಶ್ನೆ ಮಾಡುತ್ತಿದೆ. ಆದರೆ, ಈ ಪ್ರಕರಣವನ್ನು ಮೊದಲು ಬಯಲಿಗೆ ತಂದಿದ್ದೇ ಕಾಂಗ್ರೆಸ್‌ ಎಂದು ಬಿಜೆಪಿ ಹೇಳಿದೆ. ಪ್ರಕರಣದ ಕುರಿತಾಗಿ 2022ರ ಜುಲೈನಲ್ಲಿ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈಗ ದೆಹಲಿ ಕಾಂಗ್ರೆಸ್‌, ಕೇಜ್ರಿವಾಲ್‌ ಬಂಧನವನ್ನು ವಿರೋಧಿಸುತ್ತಿದೆ ಎಂದಿದೆ.

ಅಂದು ದೆಹಲಿ ಕಾಂಗ್ರೆಸ್‌ನ ನಾಯಕರಾಗಿದ್ದ ಅಜಯ್‌ ಮಾಕೆನ್‌ ಪತ್ರಿಕಾಗೋಷ್ಠಿ ನಡೆಸಿ ಹಗರಣವನ್ನು ಬಯಲಿಗೆಳೆದಿದ್ದರು.' ಲಿಕ್ಕರ್ ಹಗರಣ ಈಗ  ಬಟಾ ಬಯಲಾಗಿದೆ. ಇವರು ಕೋಟಿ ಕೋಟಿ  ಹಣ ಲೂಟಿ ಹೊಡೆದಿದ್ದಾರೆ. ಅರವಿಂದ್​​ ಕೇಜ್ರಿವಾಲ್​ ತಮ್ಮ ಬ್ಯುಸಿನೆಸ್​ಗಾಗಿ ಪ್ರೈವೇಟ್ ವೋಲ್​​ಸೆಲ್ ಡಿಲರ್ಸ್​​ ಜೊತೆ ​ಸೇರಿಕೊಂಡು ಶೇ.5 ರಿಂದ ಶೇ12 ರಷ್ಟು ಕಮಿಷನ್​ ತಗೊಂಡಿದ್ದಾರೆ ಎಂದು ಆರೋಪ ಮಾಡಿದ್ದರು.

Breaking: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ 7 ದಿನ ಕಸ್ಟಡಿ!

ಅದರಲ್ಲಿ ಶೇ.6ರಷ್ಟು ಕಿಕ್​ಬ್ಯಾಕ್​​ ಅನ್ನು  ಅರವಿಂದ್​ ಕೇಜ್ರಿವಾಲ್ ತಗೊಂಡಿದ್ದಾರೆ. 100 ಕೋಟಿ ಹಣವನ್ನ ಗೋವಾ  ಚುನಾವಣೆಯಲ್ಲಿ ಬಳಸಿದ್ದಾರೆ. ಕೇಜ್ರಿವಾಲ್​ ಈಗ ಕಾಂಗ್ರೆಸ್​​ ವಿರುದ್ಧವಾಗಿ ಆರೋಪ ಮಾಡ್ತಾರೆ. ಕೇಜ್ರಿವಾಲ್​ಗೆ ಯಾವ  ನೈತಿಕತೆ ಇದೆ. ಜಾಹಿರಾತುಗಳಲ್ಲಿ ಕಿಕ್​ಬ್ಯಾಕ್​ ಪಡೆದಿರೋದು ಬಯಲಾಗಿದೆ. ಇಡಿಯಿಂದ ಚಾರ್ಜ್​ಶೀಟ್ ಕೂಡ ಮಾಡಲಾಗಿದೆ ಎಂದು ಅಜಯ್‌ ಮಾಕೆನ್‌ ಹೇಳಿದ್ದರು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more