ಸನಾತನ ಧರ್ಮದ ವಿರುದ್ಧ ಮುಂದುವರಿದ ಡಿಎಂಕೆ ದಾಳಿ: ಅಂತರ ಕಾಯ್ದುಕೊಳ್ತಾ I.N.D.I.A ಕೂಟ ?

Sep 8, 2023, 12:09 PM IST

ತಮಿಳುನಾಡಿನಲ್ಲಿ ಸನಾತನ ಧರ್ಮದ(Sanatana Dharma)ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ಒಬ್ಬರಾದ ಮೇಲೆ ಒಬ್ಬರಂತೆ ಡಿಎಂಕೆ ನಾಯಕರು ಸನಾತನ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಮೊನ್ನೆ ಉದಯನಿಧಿ(Udayanidhi) ಮಾತನಾಡಿದ್ದು, ನಿನ್ನೆ ಎ. ರಾಜಾ(A.Raja) ಸನಾತನ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಇನ್ನೂ ವಿಪಕ್ಷಗಳು ಈ ರೀತಿ ಹೇಳಿಕೆ ನೀಡುತ್ತಿದ್ದರೂ ನಾಯಕರು ಮಾತ್ರ ಸುಮ್ಮನಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?