ಎನ್‌ಡಿಎ ಒಳಗೂ ನಡೀತಿದೆಯಾ ಮುಸುಕಿನ ಗುದ್ದಾಟ..? ಐಎನ್‌ಡಿಐಎಗೆ ಶಾಪವಾಗುತ್ತಾ ಒಳಜಗಳ..?

ಎನ್‌ಡಿಎ ಒಳಗೂ ನಡೀತಿದೆಯಾ ಮುಸುಕಿನ ಗುದ್ದಾಟ..? ಐಎನ್‌ಡಿಐಎಗೆ ಶಾಪವಾಗುತ್ತಾ ಒಳಜಗಳ..?

Published : Nov 03, 2023, 02:58 PM IST

I.N.D.I.Aಲಿ ಶುರುವಾಗಿದೆ ಕ್ಷೇತ್ರಕ್ಕಾಗಿ ಹಗ್ಗಜಗ್ಗಾಟ..!
ಪಂಚರಾಜ್ಯ ಚುನಾವಣೆ ಹೊತ್ತಲ್ಲಿ ಮೈತ್ರಿ-ಮನಸ್ತಾಪ!
ಕೋಲಾಹಲ ಸೃಷ್ಟಿಸಿದೆ ಕ್ಷೇತ್ರ ಹಂಚಿಕೆಯ ಗೊಂದಲ!

ಅರ್ಧ ವರ್ಷ ಇನ್ನೊಂದರ್ಧ ವರ್ಷ ಅಷ್ಟೇ ಬಾಕಿ, ಲೋಕಸಭಾ(Loksabha) ಸಂಗ್ರಾಮ ಅನ್ನೋ ಮಹಾ ಸಂಘರ್ಷಕ್ಕೆ. ಆದ್ರೆ, ಆ ಯುದ್ಧವನ್ನ ಗೆಲ್ಲೋದಕ್ಕೆ ಸಿದ್ಧವಾಗ್ತಾ ಇರೋ ಮೈತ್ರಿಪಡೆಗಳಲ್ಲೇ ಸವಾಲು ಸೃಷ್ಟಿಯಾಗಿದೆ. ಸಮಸ್ಯೆ ತಲೆದೂರಿದೆ. ಲೆಕ್ಕಾಚಾರಗಳೇ ಬುಡಮೇಲಾಗೋ ಸಾಧ್ಯತೆ ಕಾಣ್ತಾ ಇದೆ. ಈ ಎರಡು ಮೈತ್ರಿಕೂಟಗಳ ಮಧ್ಯೆ ಯುದ್ಧವಂತೂ ಶುರುವಾಗಿದೆ. ಆದ್ರೆ, ಈ ಮೈತ್ರಿ ಕೂಟದ ಒಳಗೇ ಅಂತರ್ಯುದ್ಧವೇ ಆರಂಭವಾಗಿದೆಯಾ ಅನ್ನೋ ಕುತೂಹಲವೊಂದು ಈಗ ನಿರ್ಮಾಣವಾಗಿದೆ. ಅದಕ್ಕೆ ಒಂದಲ್ಲ ಅಂತ ಹತ್ತಾರು ಕಾರಣಗಳು ಕಣ್ಣಿಗೆ ರಾಚ್ತಾ ಇದಾವೆ. ಕಳೆದ ನಾಲ್ಕು ತಿಂಗಳ ಹಿಂದೆ, ಇದೇ ಬೆಂಗಳೂರಲ್ಲಿ, ಯುಪಿಎ(UPA) ಅನ್ನೋ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ, ಐಎನ್‌ಡಿಐಎ(I.N.D.I.A ) ಅನ್ನೋ ಹೊಸ ಸ್ವರೂಪ ಪಡೆದು, ಎನ್‌ಡಿಎ ವಿರುದ್ಧ ರಣಘೋಷ ಮೊಳಗಿಸಿತ್ತು. ಅದೇ ಹೊತ್ತಲ್ಲಿ, ಅಲ್ಲಿ, ದೂರದ ದೆಹಲಿಯಲ್ಲಿ ಮೋದಿ ನಾಯಕತ್ವದಲ್ಲಿ ಎನ್‌ಡಿಎ ಮೈತ್ರಿ ಕೂಟವೂ ಹೊಸ ಆಕೃತಿ ಪಡೆದಿತ್ತು. ಈ ಇಬ್ಬರ ಟಾರ್ಗೆಟ್ ಇದ್ದದ್ದು, ಅವರನ್ನ ಇವರು ಗೆಲ್ಲೋದು. ಇವರನ್ನ ಅವರು ಗೆಲ್ಲೋದು. ಈ ಗೆದ್ದೇ ಗೆಲ್ಲೋ ಆಟದಲ್ಲಿ, ನಾಲ್ಕು ತಿಂಗಳ ಬಳಿಕ ಯಾರ್ಯಾರು ಏನೇನು ಮಾಡಿದಾರೆ ಅನ್ನೋದನ್ನ ನೋಡಿದ್ರೆ, ಈ ಮೈತ್ರಿಕೂಟಗಳ ಮಿಸ್ಟ್ರಿ ಅರ್ಥವಾಗುತ್ತೆ. ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗ ಎನ್‌ಡಿಎ ಭಾಗವಾಗಿದೆ. ಮುಂದಿನ ಲೋಕಸಭಾ ಚುನಾವಣೆನಾ ಬಿಜೆಪಿ ಜೊತೆ ಮೈತ್ರಿ ಮಾಡ್ಕೊಂಡು ಎದುರಿಸಲಿದೆ. ಇದರಿಂದ ಬಿಜೆಪಿಗೆ ಅದೇನು ಲಾಭವಾಗಲಿದೆಯೋ ಅಂದಾಜು ಸಿಗುತ್ತಿಲ್ಲ. ಆದ್ರೆ, ಜೆಡಿಎಸ್‌ಗೆ ಅಂತೂ ಕನಿಷ್ಟ ಕೆಲವು ಸೀಟುಗಳಲ್ಲಿ ಗೆಲುವು ಸಿಕ್ಕಷ್ಟೇ ಖುಷಿಯಾಗಿದೆ.

ಇದನ್ನೂ ವೀಕ್ಷಿಸಿ:  ಅಪ್ಪ ಮಗನನ್ನ ಕೊಂದರೆ.. ಇಲ್ಲಿ ಮಗ ತಾಯಿಯನ್ನ ಮುಗಿಸಿದ..!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more