ಎನ್‌ಡಿಎ ಒಳಗೂ ನಡೀತಿದೆಯಾ ಮುಸುಕಿನ ಗುದ್ದಾಟ..? ಐಎನ್‌ಡಿಐಎಗೆ ಶಾಪವಾಗುತ್ತಾ ಒಳಜಗಳ..?

ಎನ್‌ಡಿಎ ಒಳಗೂ ನಡೀತಿದೆಯಾ ಮುಸುಕಿನ ಗುದ್ದಾಟ..? ಐಎನ್‌ಡಿಐಎಗೆ ಶಾಪವಾಗುತ್ತಾ ಒಳಜಗಳ..?

Published : Nov 03, 2023, 02:58 PM IST

I.N.D.I.Aಲಿ ಶುರುವಾಗಿದೆ ಕ್ಷೇತ್ರಕ್ಕಾಗಿ ಹಗ್ಗಜಗ್ಗಾಟ..!
ಪಂಚರಾಜ್ಯ ಚುನಾವಣೆ ಹೊತ್ತಲ್ಲಿ ಮೈತ್ರಿ-ಮನಸ್ತಾಪ!
ಕೋಲಾಹಲ ಸೃಷ್ಟಿಸಿದೆ ಕ್ಷೇತ್ರ ಹಂಚಿಕೆಯ ಗೊಂದಲ!

ಅರ್ಧ ವರ್ಷ ಇನ್ನೊಂದರ್ಧ ವರ್ಷ ಅಷ್ಟೇ ಬಾಕಿ, ಲೋಕಸಭಾ(Loksabha) ಸಂಗ್ರಾಮ ಅನ್ನೋ ಮಹಾ ಸಂಘರ್ಷಕ್ಕೆ. ಆದ್ರೆ, ಆ ಯುದ್ಧವನ್ನ ಗೆಲ್ಲೋದಕ್ಕೆ ಸಿದ್ಧವಾಗ್ತಾ ಇರೋ ಮೈತ್ರಿಪಡೆಗಳಲ್ಲೇ ಸವಾಲು ಸೃಷ್ಟಿಯಾಗಿದೆ. ಸಮಸ್ಯೆ ತಲೆದೂರಿದೆ. ಲೆಕ್ಕಾಚಾರಗಳೇ ಬುಡಮೇಲಾಗೋ ಸಾಧ್ಯತೆ ಕಾಣ್ತಾ ಇದೆ. ಈ ಎರಡು ಮೈತ್ರಿಕೂಟಗಳ ಮಧ್ಯೆ ಯುದ್ಧವಂತೂ ಶುರುವಾಗಿದೆ. ಆದ್ರೆ, ಈ ಮೈತ್ರಿ ಕೂಟದ ಒಳಗೇ ಅಂತರ್ಯುದ್ಧವೇ ಆರಂಭವಾಗಿದೆಯಾ ಅನ್ನೋ ಕುತೂಹಲವೊಂದು ಈಗ ನಿರ್ಮಾಣವಾಗಿದೆ. ಅದಕ್ಕೆ ಒಂದಲ್ಲ ಅಂತ ಹತ್ತಾರು ಕಾರಣಗಳು ಕಣ್ಣಿಗೆ ರಾಚ್ತಾ ಇದಾವೆ. ಕಳೆದ ನಾಲ್ಕು ತಿಂಗಳ ಹಿಂದೆ, ಇದೇ ಬೆಂಗಳೂರಲ್ಲಿ, ಯುಪಿಎ(UPA) ಅನ್ನೋ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ, ಐಎನ್‌ಡಿಐಎ(I.N.D.I.A ) ಅನ್ನೋ ಹೊಸ ಸ್ವರೂಪ ಪಡೆದು, ಎನ್‌ಡಿಎ ವಿರುದ್ಧ ರಣಘೋಷ ಮೊಳಗಿಸಿತ್ತು. ಅದೇ ಹೊತ್ತಲ್ಲಿ, ಅಲ್ಲಿ, ದೂರದ ದೆಹಲಿಯಲ್ಲಿ ಮೋದಿ ನಾಯಕತ್ವದಲ್ಲಿ ಎನ್‌ಡಿಎ ಮೈತ್ರಿ ಕೂಟವೂ ಹೊಸ ಆಕೃತಿ ಪಡೆದಿತ್ತು. ಈ ಇಬ್ಬರ ಟಾರ್ಗೆಟ್ ಇದ್ದದ್ದು, ಅವರನ್ನ ಇವರು ಗೆಲ್ಲೋದು. ಇವರನ್ನ ಅವರು ಗೆಲ್ಲೋದು. ಈ ಗೆದ್ದೇ ಗೆಲ್ಲೋ ಆಟದಲ್ಲಿ, ನಾಲ್ಕು ತಿಂಗಳ ಬಳಿಕ ಯಾರ್ಯಾರು ಏನೇನು ಮಾಡಿದಾರೆ ಅನ್ನೋದನ್ನ ನೋಡಿದ್ರೆ, ಈ ಮೈತ್ರಿಕೂಟಗಳ ಮಿಸ್ಟ್ರಿ ಅರ್ಥವಾಗುತ್ತೆ. ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗ ಎನ್‌ಡಿಎ ಭಾಗವಾಗಿದೆ. ಮುಂದಿನ ಲೋಕಸಭಾ ಚುನಾವಣೆನಾ ಬಿಜೆಪಿ ಜೊತೆ ಮೈತ್ರಿ ಮಾಡ್ಕೊಂಡು ಎದುರಿಸಲಿದೆ. ಇದರಿಂದ ಬಿಜೆಪಿಗೆ ಅದೇನು ಲಾಭವಾಗಲಿದೆಯೋ ಅಂದಾಜು ಸಿಗುತ್ತಿಲ್ಲ. ಆದ್ರೆ, ಜೆಡಿಎಸ್‌ಗೆ ಅಂತೂ ಕನಿಷ್ಟ ಕೆಲವು ಸೀಟುಗಳಲ್ಲಿ ಗೆಲುವು ಸಿಕ್ಕಷ್ಟೇ ಖುಷಿಯಾಗಿದೆ.

ಇದನ್ನೂ ವೀಕ್ಷಿಸಿ:  ಅಪ್ಪ ಮಗನನ್ನ ಕೊಂದರೆ.. ಇಲ್ಲಿ ಮಗ ತಾಯಿಯನ್ನ ಮುಗಿಸಿದ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more