News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

Published : Feb 03, 2024, 09:18 AM IST

ಡಿಕೆ ಸುರೇಶ್ ಹೇಳಿಕೆಗೆ ಖಂಡನೆ, ಮುಗಿಬಿದ್ದ BJP ನಾಯಕರು
ದೇಶಕ್ಕೆ ಕ್ಷಮೆಯಾಚಿಸಿ.. ಡಿಕೆ ಸುರೇಶ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಸದ ಡಿಕೆ ಸುರೇಶ್ ಮಾತು ಸಹಿಸಲ್ಲ ಎಂದು ಖರ್ಗೆ ಸ್ಪಷ್ಟನೆ!

ಅನುದಾನ ಅನ್ಯಾಯ ಆಗ್ತಿದೆ ಎಂದು ಟೀಕೆ ಮಾಡುತ್ತಾ ಕಾಂಗ್ರೆಸ್(Congress) ಸಂಸದ ಡಿ.ಕೆ. ಸುರೇಶ್(DK Suresh) ದೇಶವನ್ನೇ ಒಡೆಯುವ ಮಾತಾಡಿದ್ದಾರೆ. ಕಾಂಗ್ರೆಸ್ ಸಂಸದನ ಈ ಹೇಳಿಕೆ ದೇಶಾದ್ಯಂತ ಕಿಚ್ಚೆಬ್ಬಿಸಿದೆ. ಸದನದಲ್ಲೂ ಬಿಜೆಪಿ(BJP) ಸದಸ್ಯರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಈ ಬೆನ್ನಲ್ಲೇ ರಾಜ್ಯಸಭೆಯಲ್ಲೂ ಮಾತಾಡಿದ ಖರ್ಗೆ(Mallikarjun Kharge), ದೇಶ ಒಡೆಯುವ ಮಾತನ್ನೂ ಸಹಿಸಲ್ಲ. ತಪ್ಪಿದ್ದರೆ ಹಕ್ಕುಚ್ಯುತಿಗೆ ಕೊಡಿ ಎಂದು ಕೂಡ ಮನವಿ ಮಾಡಿದ್ರು. ಅತ್ತ ಲೋಕಸಭೆಯಲ್ಲೂ(Loksabha) ಜೋಶಿ, ಕಾಂಗ್ರೆಸ್ ದೇಶದ ಕ್ಷಮೆಯಾಚಿಸಲಿ ಎಂದು ಆಗ್ರಹ ಮಾಡಿದ್ರು. ಲೋಕಸಭೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಿಷನ್ ಅಸ್ತ್ರ ಹಿಡಿದೇ ಬಿಜೆಪಿ ವಿರುದ್ಧ ದಾಳಿ ನಡೆಸಿ, ಅಧಿಕಾರ ಹಿಡಿದಿದೆ. ಈಗ ಇದೇ ಅಸ್ತ್ರವೇ ಕಾಂಗ್ರೆಸ್‌ಗೆ ಯೂಟರ್ನ್ ಆಗಿದೆ. ಹಾಸನದಲ್ಲಿ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿ ಶಿವರಾಂ(B Shivaram), ನಮ್ಮ ಸರ್ಕಾರದಲ್ಲೂ ಶೇ.40ಕ್ಕಿಂತಲೂ ಹೆಚ್ಚು ಕಮಿಷನ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆಯೂ ಆಡಳಿತರೂಢ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ.

ಇದನ್ನೂ ವೀಕ್ಷಿಸಿ: Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more