News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

News Hour: ಸಂಸತ್ ಕಲಾಪದಲ್ಲೂ ಪ್ರತ್ಯೇಕ ರಾಷ್ಟ್ರದ ಕಿಚ್ಚು: ಡಿ.ಕೆ. ಸುರೇಶ್ ಕ್ಷಮೆ ಕೇಳುವಂತೆ ಬಿಜೆಪಿ ಪಟ್ಟು !

Published : Feb 03, 2024, 09:18 AM IST

ಡಿಕೆ ಸುರೇಶ್ ಹೇಳಿಕೆಗೆ ಖಂಡನೆ, ಮುಗಿಬಿದ್ದ BJP ನಾಯಕರು
ದೇಶಕ್ಕೆ ಕ್ಷಮೆಯಾಚಿಸಿ.. ಡಿಕೆ ಸುರೇಶ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಂಸದ ಡಿಕೆ ಸುರೇಶ್ ಮಾತು ಸಹಿಸಲ್ಲ ಎಂದು ಖರ್ಗೆ ಸ್ಪಷ್ಟನೆ!

ಅನುದಾನ ಅನ್ಯಾಯ ಆಗ್ತಿದೆ ಎಂದು ಟೀಕೆ ಮಾಡುತ್ತಾ ಕಾಂಗ್ರೆಸ್(Congress) ಸಂಸದ ಡಿ.ಕೆ. ಸುರೇಶ್(DK Suresh) ದೇಶವನ್ನೇ ಒಡೆಯುವ ಮಾತಾಡಿದ್ದಾರೆ. ಕಾಂಗ್ರೆಸ್ ಸಂಸದನ ಈ ಹೇಳಿಕೆ ದೇಶಾದ್ಯಂತ ಕಿಚ್ಚೆಬ್ಬಿಸಿದೆ. ಸದನದಲ್ಲೂ ಬಿಜೆಪಿ(BJP) ಸದಸ್ಯರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಈ ಬೆನ್ನಲ್ಲೇ ರಾಜ್ಯಸಭೆಯಲ್ಲೂ ಮಾತಾಡಿದ ಖರ್ಗೆ(Mallikarjun Kharge), ದೇಶ ಒಡೆಯುವ ಮಾತನ್ನೂ ಸಹಿಸಲ್ಲ. ತಪ್ಪಿದ್ದರೆ ಹಕ್ಕುಚ್ಯುತಿಗೆ ಕೊಡಿ ಎಂದು ಕೂಡ ಮನವಿ ಮಾಡಿದ್ರು. ಅತ್ತ ಲೋಕಸಭೆಯಲ್ಲೂ(Loksabha) ಜೋಶಿ, ಕಾಂಗ್ರೆಸ್ ದೇಶದ ಕ್ಷಮೆಯಾಚಿಸಲಿ ಎಂದು ಆಗ್ರಹ ಮಾಡಿದ್ರು. ಲೋಕಸಭೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಿಷನ್ ಅಸ್ತ್ರ ಹಿಡಿದೇ ಬಿಜೆಪಿ ವಿರುದ್ಧ ದಾಳಿ ನಡೆಸಿ, ಅಧಿಕಾರ ಹಿಡಿದಿದೆ. ಈಗ ಇದೇ ಅಸ್ತ್ರವೇ ಕಾಂಗ್ರೆಸ್‌ಗೆ ಯೂಟರ್ನ್ ಆಗಿದೆ. ಹಾಸನದಲ್ಲಿ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿ ಶಿವರಾಂ(B Shivaram), ನಮ್ಮ ಸರ್ಕಾರದಲ್ಲೂ ಶೇ.40ಕ್ಕಿಂತಲೂ ಹೆಚ್ಚು ಕಮಿಷನ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆಯೂ ಆಡಳಿತರೂಢ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ.

ಇದನ್ನೂ ವೀಕ್ಷಿಸಿ: Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more