'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

'ಕಾಂಗ್ರೆಸ್‌ಗಾಗಿ ಕಾಸು ಕೊಡಿ..' ಲೋಕಸಭೆ ಚುನಾವಣೆಗೆ ಜನರಿಂದ ಹಣವೆತ್ತಲು ಮುಂದಾದ ಕಾಂಗ್ರೆಸ್‌!

Published : Dec 16, 2023, 11:37 PM IST

ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮವು ಪ್ರಮುಖ ಅಭಿಯಾನವಾಗಿದ್ದು, ಅದರ ಅಡಿಯಲ್ಲಿ ಸರಣಿಯ ಅಭಿಯಾನವನ್ನು ಕಾಂಗ್ರೆಸ್‌ ಕೈಗೊಳ್ಳಲಿದೆ. ಇವುಗಳಲ್ಲಿ ಮೊದಲನೆಯದು ಕಾಂಗ್ರೆಸ್‌ನ 138 ನೇ ವಾರ್ಷಿಕೋತ್ಸವದ ನೆನಪಿಗಾಗಿ ಪಕ್ಷವು 138 ರ ಗುಣಕಗಳಲ್ಲಿ ದೇಣಿಗೆಗಳನ್ನು ಸಂಗ್ರಹ ಮಾಡಲಿದೆ.

ನವದೆಹಲಿ (ಡಿ.16): 2024ರ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್‌ ಕ್ರೌಂಡ್‌ ಫಂಡಿಂಗ್‌ ಮಾಡಲು ಮುಂದಾಗಿದೆ. ಪಕ್ಷ ಬಲಪಡಿಸಲು ಕ್ರೌಡ್ ಫಂಡಿಂಗ್ ತಂತ್ರಗಾರಿಕೆ ಮಾಡುತ್ತಿದೆ. ಪ್ರತಿ ಬೂತ್‌ನಿಂದ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇಡಲಾಗಿದೆ.

ಲೋಕಸಭೆ ಚುನಾವಣೆ ಖರ್ಚಿಗೆ ಈ ಹಣವನ್ನು ಉಪಯೋಗಿಸಿಕೊಳ್ಳಲಾಗುತ್ತದೆ ಎಂದು ಹೇಳಿದೆ. ಬಿಜೆಪಿಯ ವಿರುದ್ಧದ ಹೋರಾಟ ಮಾಡುತ್ತಿದ್ದೇವೆ ಅದಕ್ಕಾಗಿ ಹಣ ನೀಡುವಂತೆ ಜನರ ಬಳಿ ಕಾಂಗ್ರೆಸ್‌ ಹೋಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಇದಕ್ಕೆ ಚಾಲನೆ ನೀಡಿದರು.

ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕಮಲ್‌ನಾಥ್‌ ವಜಾ, ಜಿತು ಪತ್ವಾರಿ ಹೊಸ ಚೀಫ್‌

138, 1380 ಅಥವಾ 13080 ರೂಪಾಯಿ ಹಣವನ್ನು ಜನರು ನೀಡಬಹುದಾಗಿದೆ. ಪ್ರತಿ ಬೂತ್‌ನಲ್ಲಿ ಕನಿಷ್ಠ 10 ಮನೆಗಳಿಂದ ದೇಣಿಗೆ ಸಂಗ್ರಹ ಗುರಿ ಇರಿಸಿಕೊಳ್ಳಲಾಗಿದೆ. ಅದಲ್ಲದೆ, ವೆಬ್‌ಸೈಟ್‌ ಮೂಲಕವೂ ದೇಣಿಗೆ ನೀಡಬಹುದಾಗಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more