ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

Published : Jul 17, 2024, 11:37 AM ISTUpdated : Jul 17, 2024, 11:38 AM IST

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದೆ. ಕಾಶ್ಮೀರದ ದೊಡಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.  

ಜಮ್ಮು-ಕಾಶ್ಮೀರದ (Jammu and Kashmir) ದೋಡಾ ಜಿಲ್ಲೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು-ಭಾರತೀಯ ಯೋಧರ ನಡುವೆ ಗುಂಡಿನ ಕಾಳಗ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಓರ್ವ ಯೋಧನಿಗೆ(soldiers) ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೋಡಾದಲ್ಲಿ(Doda Encounter) ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ. ನಿನ್ನೆ ಸಂಜೆ ದೋಡಾದಿಂದ 55 ಕಿ.ಮೀ ದೂರದಲ್ಲಿ ಕಾರ್ಯಾಚರಣೆ ನಡೆಸಿದ್ದು, ರಾತ್ರಿ 7.45ರ ಸುಮಾರಿಗೆ ಉಗ್ರರು-ಭದ್ರತಾ ಪಡೆ ಮಧ್ಯೆ ಫೈರಿಂಗ್ ನಡೆದಿದೆ. ರಾಷ್ಟ್ರೀಯ ರೈಫಲ್ಸ್, ಜ-ಕಾ ಪೊಲೀಸರ (Police) ವಿಶೇಷ ತಂಡ ಜಂಟಿ ಕಾರ್ಯಾಚರಣೆ ನಡೆಸಿದೆ. ದೋಡಾ ಅರಣ್ಯದೊಳಗೆ ಅಡಗಿಕೊಂಡಿದ್ದ ಶಸ್ತ್ರಸಜ್ಜಿತ 6 ರಿಂದ 8 ಉಗ್ರರು ಇರಬಹುದು. ಅತ್ಯಂತ ಕಠಿಣ ಭೂಪ್ರದೇಶದಲ್ಲೂ ಯೋಧರಿಂದ ಕಾರ್ಯಾಚರಣೆ ನಡೆಸಲಾಗಿದೆ. ಉಗ್ರರ ಗುಂಡಿನ ದಾಳಿಗೆ ಸೇನಾಧಿಕಾರಿ ಸೇರಿ ಐವರು ಯೋಧರಿಗೆ ಗಾಯವಾಗಿದೆ.

ಇದನ್ನೂ ವೀಕ್ಷಿಸಿ:  ಮೊನಾಲಿಸಾ ನೆನಪಲ್ಲಿ ‘ಗೌರಿ’ ಹಾಡು ಬಿಡುಗಡೆ: ಈ ಸಿನಿಮಾಗೆ 20 ವರ್ಷದ ಸಂಭ್ರಮ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more