ಬೆಂಗಳೂರು (ಅ.16): ಮಹಾರಾಷ್ಟ್ರದಲ್ಲಿ ಬಿಜೆಪಿ ಪರ ಮತಯಾಚಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಮಹಾರಾಷ್ಟ್ರದಲ್ಲೂ ಪ್ರಬಲವಾಗಿರುವ ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಲಿಂಗಾಯತ ಸಮುದಾಯಕ್ಕೆ ಸೇರಿದ ಸಿಎಂ ಯಡಿಯೂರಪ್ಪ, ಮತ್ತು ಡಿಸಿಎಂ ಲಕ್ಷ್ಮಣ್ ಸವದಿಯವರನ್ನು ಫೀಲ್ಡಿಗಿಳಿಸಿದೆ. ಒಟ್ಟು 288 ಕ್ಷೇತ್ರಗಳಿರುವ ಮಹಾರಾಷ್ಟ್ರ ವಿಧಾನಸಭೆಗೆ ಅ.21ರಂದು ಚುನಾವಣೆ ನಡೆಯಲಿದೆ. ಅ.24ಕ್ಕೆ ಮತಗಣನೆ ನಡೆಯಲಿದೆ.