ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

Published : Feb 17, 2024, 05:46 PM IST

ಮೋದಿ ಜೊತೆ ನಿಲ್ಲುತ್ತಾ ನ್ಯಾಷನಲ್ ಕಾನ್ಫರೆನ್ಸ್..!
ಕಾಶ್ಮೀರದಲ್ಲಿ ಕೈ ಕೊಟ್ಟ ಫಾರೂಕ್ ಅಬ್ದುಲ್ಲಾ..!
ದಿನೇ ದಿನೇ ಬಲಹೀನವಾಗುತ್ತಿದೆ I.N.D.I.A..!

ಪ್ರಧಾನಿ ನರೇಂದ್ರ ಮೋದಿಯನ್ನ ಮಣಿಸಬೇಕು ಅನ್ನೋ ಏಕಮಾತ್ರ ಉದ್ದೇಶದಿಂದ ಹುಟ್ಟಿಕೊಂಡಿದ್ದ ಇಂಡಿಯಾ ಒಕ್ಕೂಟ(INDIA Alliance) ದಿನೇ ದಿನೇ ಅಶಕ್ತವಾಗ್ತಾ ಇದೆ. ಒಕ್ಕೂಟದ ಸೃಷ್ಟಿಗೆ ಕಾರಣರಗಾಗಿದ್ದ ನಿತೀಶ್ ಕುಮಾರ್ , ಕಾಂಗ್ರೆಸ್(Congress) ಜೊತೆಗಿನ ಸಖ್ಯವನ್ನ ತೊರೆದು ಕಮಲ ಹಿಡಿದು ನಿಂತಿದ್ದಾರೆ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ನಂತರ ಫಾರೂಕ್ ಅಬ್ದುಲ್ಲಾ ಕೂಡ ಕಾಶ್ಮೀರದಲ್ಲಿ ಇಂಡಿ ಒಕ್ಕೂಟಕ್ಕೆ ಕೈ ಎತ್ತಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ(Loksabha) ಮೋದಿಯನ್ನ ಸೋಲಿಸಿ ಮಹಾಮೈತ್ರಿಕೂಟವನ್ನ ಅಧಿಕಾರಕ್ಕೆ ತರುವ ಉದ್ದೇಶದಿಂದ ಸೃಷ್ಟಿಯಾದ ಒಕ್ಕೂಟ ಇಂಡಿ ಅಲಾಯನ್ಸ್. ಕಾಂಗ್ರೆಸ್ , ಆಮ್ ಆದ್ಮಿ, ಟಿಎಂಸಿ, ಜೆಡಿಯು ಹೀಗೆ ದೇಶದ ಪ್ರಮುಖ ಪಕ್ಷಗಳೆಲ್ಲಾ ಸೇರಿ ಮಾಡಿಕೊಂಡಿದ್ದ ಮೈತ್ರಿಗೆ ಯಾರೋ ಮಾಟ ಮಾಡಿದಂತಿದೆ. ದಿನಕ್ಕೊಂದು ವಿಕೆಟ್ ಉದುರ್ತಾನೆ ಇದೆ. ಇಂಡಿ ಅಲಾಯನ್ಸ್ ಸೃಷ್ಟಿಗೆ ಮುಖ್ಯ ಕಾರಣರಾಗಿದ್ದ ನಿತೀಶ್ ಕುಮಾರ್ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಬಿಜೆಪಿ(BJP) ಜೊತೆಗೆ ನಂಟು ಮಾಡಿಕೊಂಡಿದ್ದಾರೆ. ಅತ್ತ ಬಂಗಾಳದಲ್ಲಿ ದೀದಿ ನಾವೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದು ಅನ್ನೋ ಮೂಲಕ ಕಾಂಗ್ರೆಸ್ಸಿಗೆ ಬಿಸಿ ತಾಗಿಸಿದ್ದಾರೆ..ಇತ್ತ ದೆಹಲಿ ಹಾಗೂ ಪಂಜಾಬಿನಲ್ಲಿ ಆಡಳಿತದಲ್ಲಿರೋ ಆಮ್ ಆದ್ಮಿ ಪಕ್ಷವೂ ಅದೇ ರಾಗವನ್ನ ಹಾಡಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ವಿಜಯಪುರದ ಡಾ. ಶಿವಾನಂದ ಕೆಲೂರ್‌

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more