ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

Published : Feb 17, 2024, 05:46 PM IST

ಮೋದಿ ಜೊತೆ ನಿಲ್ಲುತ್ತಾ ನ್ಯಾಷನಲ್ ಕಾನ್ಫರೆನ್ಸ್..!
ಕಾಶ್ಮೀರದಲ್ಲಿ ಕೈ ಕೊಟ್ಟ ಫಾರೂಕ್ ಅಬ್ದುಲ್ಲಾ..!
ದಿನೇ ದಿನೇ ಬಲಹೀನವಾಗುತ್ತಿದೆ I.N.D.I.A..!

ಪ್ರಧಾನಿ ನರೇಂದ್ರ ಮೋದಿಯನ್ನ ಮಣಿಸಬೇಕು ಅನ್ನೋ ಏಕಮಾತ್ರ ಉದ್ದೇಶದಿಂದ ಹುಟ್ಟಿಕೊಂಡಿದ್ದ ಇಂಡಿಯಾ ಒಕ್ಕೂಟ(INDIA Alliance) ದಿನೇ ದಿನೇ ಅಶಕ್ತವಾಗ್ತಾ ಇದೆ. ಒಕ್ಕೂಟದ ಸೃಷ್ಟಿಗೆ ಕಾರಣರಗಾಗಿದ್ದ ನಿತೀಶ್ ಕುಮಾರ್ , ಕಾಂಗ್ರೆಸ್(Congress) ಜೊತೆಗಿನ ಸಖ್ಯವನ್ನ ತೊರೆದು ಕಮಲ ಹಿಡಿದು ನಿಂತಿದ್ದಾರೆ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ನಂತರ ಫಾರೂಕ್ ಅಬ್ದುಲ್ಲಾ ಕೂಡ ಕಾಶ್ಮೀರದಲ್ಲಿ ಇಂಡಿ ಒಕ್ಕೂಟಕ್ಕೆ ಕೈ ಎತ್ತಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ(Loksabha) ಮೋದಿಯನ್ನ ಸೋಲಿಸಿ ಮಹಾಮೈತ್ರಿಕೂಟವನ್ನ ಅಧಿಕಾರಕ್ಕೆ ತರುವ ಉದ್ದೇಶದಿಂದ ಸೃಷ್ಟಿಯಾದ ಒಕ್ಕೂಟ ಇಂಡಿ ಅಲಾಯನ್ಸ್. ಕಾಂಗ್ರೆಸ್ , ಆಮ್ ಆದ್ಮಿ, ಟಿಎಂಸಿ, ಜೆಡಿಯು ಹೀಗೆ ದೇಶದ ಪ್ರಮುಖ ಪಕ್ಷಗಳೆಲ್ಲಾ ಸೇರಿ ಮಾಡಿಕೊಂಡಿದ್ದ ಮೈತ್ರಿಗೆ ಯಾರೋ ಮಾಟ ಮಾಡಿದಂತಿದೆ. ದಿನಕ್ಕೊಂದು ವಿಕೆಟ್ ಉದುರ್ತಾನೆ ಇದೆ. ಇಂಡಿ ಅಲಾಯನ್ಸ್ ಸೃಷ್ಟಿಗೆ ಮುಖ್ಯ ಕಾರಣರಾಗಿದ್ದ ನಿತೀಶ್ ಕುಮಾರ್ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಬಿಜೆಪಿ(BJP) ಜೊತೆಗೆ ನಂಟು ಮಾಡಿಕೊಂಡಿದ್ದಾರೆ. ಅತ್ತ ಬಂಗಾಳದಲ್ಲಿ ದೀದಿ ನಾವೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದು ಅನ್ನೋ ಮೂಲಕ ಕಾಂಗ್ರೆಸ್ಸಿಗೆ ಬಿಸಿ ತಾಗಿಸಿದ್ದಾರೆ..ಇತ್ತ ದೆಹಲಿ ಹಾಗೂ ಪಂಜಾಬಿನಲ್ಲಿ ಆಡಳಿತದಲ್ಲಿರೋ ಆಮ್ ಆದ್ಮಿ ಪಕ್ಷವೂ ಅದೇ ರಾಗವನ್ನ ಹಾಡಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ವಿಜಯಪುರದ ಡಾ. ಶಿವಾನಂದ ಕೆಲೂರ್‌

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more