ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

ಈಗ ಕಣಿವೆ ರಾಜ್ಯದಲ್ಲೂ ಮೈತ್ರಿ ಬಿರುಕು..! I.N.D.I.A ಕ್ಕೆ ಫಾರೂಕ್ ವಿದಾಯ..!

Published : Feb 17, 2024, 05:46 PM IST

ಮೋದಿ ಜೊತೆ ನಿಲ್ಲುತ್ತಾ ನ್ಯಾಷನಲ್ ಕಾನ್ಫರೆನ್ಸ್..!
ಕಾಶ್ಮೀರದಲ್ಲಿ ಕೈ ಕೊಟ್ಟ ಫಾರೂಕ್ ಅಬ್ದುಲ್ಲಾ..!
ದಿನೇ ದಿನೇ ಬಲಹೀನವಾಗುತ್ತಿದೆ I.N.D.I.A..!

ಪ್ರಧಾನಿ ನರೇಂದ್ರ ಮೋದಿಯನ್ನ ಮಣಿಸಬೇಕು ಅನ್ನೋ ಏಕಮಾತ್ರ ಉದ್ದೇಶದಿಂದ ಹುಟ್ಟಿಕೊಂಡಿದ್ದ ಇಂಡಿಯಾ ಒಕ್ಕೂಟ(INDIA Alliance) ದಿನೇ ದಿನೇ ಅಶಕ್ತವಾಗ್ತಾ ಇದೆ. ಒಕ್ಕೂಟದ ಸೃಷ್ಟಿಗೆ ಕಾರಣರಗಾಗಿದ್ದ ನಿತೀಶ್ ಕುಮಾರ್ , ಕಾಂಗ್ರೆಸ್(Congress) ಜೊತೆಗಿನ ಸಖ್ಯವನ್ನ ತೊರೆದು ಕಮಲ ಹಿಡಿದು ನಿಂತಿದ್ದಾರೆ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ನಂತರ ಫಾರೂಕ್ ಅಬ್ದುಲ್ಲಾ ಕೂಡ ಕಾಶ್ಮೀರದಲ್ಲಿ ಇಂಡಿ ಒಕ್ಕೂಟಕ್ಕೆ ಕೈ ಎತ್ತಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ(Loksabha) ಮೋದಿಯನ್ನ ಸೋಲಿಸಿ ಮಹಾಮೈತ್ರಿಕೂಟವನ್ನ ಅಧಿಕಾರಕ್ಕೆ ತರುವ ಉದ್ದೇಶದಿಂದ ಸೃಷ್ಟಿಯಾದ ಒಕ್ಕೂಟ ಇಂಡಿ ಅಲಾಯನ್ಸ್. ಕಾಂಗ್ರೆಸ್ , ಆಮ್ ಆದ್ಮಿ, ಟಿಎಂಸಿ, ಜೆಡಿಯು ಹೀಗೆ ದೇಶದ ಪ್ರಮುಖ ಪಕ್ಷಗಳೆಲ್ಲಾ ಸೇರಿ ಮಾಡಿಕೊಂಡಿದ್ದ ಮೈತ್ರಿಗೆ ಯಾರೋ ಮಾಟ ಮಾಡಿದಂತಿದೆ. ದಿನಕ್ಕೊಂದು ವಿಕೆಟ್ ಉದುರ್ತಾನೆ ಇದೆ. ಇಂಡಿ ಅಲಾಯನ್ಸ್ ಸೃಷ್ಟಿಗೆ ಮುಖ್ಯ ಕಾರಣರಾಗಿದ್ದ ನಿತೀಶ್ ಕುಮಾರ್ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಬಿಜೆಪಿ(BJP) ಜೊತೆಗೆ ನಂಟು ಮಾಡಿಕೊಂಡಿದ್ದಾರೆ. ಅತ್ತ ಬಂಗಾಳದಲ್ಲಿ ದೀದಿ ನಾವೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದು ಅನ್ನೋ ಮೂಲಕ ಕಾಂಗ್ರೆಸ್ಸಿಗೆ ಬಿಸಿ ತಾಗಿಸಿದ್ದಾರೆ..ಇತ್ತ ದೆಹಲಿ ಹಾಗೂ ಪಂಜಾಬಿನಲ್ಲಿ ಆಡಳಿತದಲ್ಲಿರೋ ಆಮ್ ಆದ್ಮಿ ಪಕ್ಷವೂ ಅದೇ ರಾಗವನ್ನ ಹಾಡಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ವಿಜಯಪುರದ ಡಾ. ಶಿವಾನಂದ ಕೆಲೂರ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more