ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

ಪರಿಸ್ಥಿತಿ ಕೈ ಮೀರಿದೆ, ದೇಶ ಕಾಪಾಡಲು ಏಮ್ಸ್‌ ನಿರ್ದೇಶಕರ ಎಚ್ಚರಿಕೆ!

Published : Apr 25, 2021, 02:55 PM IST

ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ನವದೆಹಲಿ(ಏ.25): ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಮೀರಿ ಹರಡುತ್ತಿದೆ. ಮಾರ್ಚ್ ಎರಡನೇ ವಾರ ಇಪ್ಪತ್ತೈದು ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೀಗ ಇದು ಏರಿಕೆಯಾಗಿ ಪ್ರತಿ ದಿನ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಹೀಗಿರುವಾಗ ಏಮ್ಸ್‌ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ಹೌದು ಪರಿಸ್ಥಿತಿ ಕೈ ಮೀರಿರುವ ಬಗ್ಗೆ ಎಚ್ಚರಿಕೆ ಕೊಟ್ಟಿರುವ ಗುಲೇರಿಯಾ, ಹತ್ತಕ್ಕಿಂತ ಹೆಚ್ಚಿನ ಸೋಂಕಿತರಿರುವ ಪ್ರದೇಶವನ್ನು ಲಾಕ್‌ಡೌನ್ ಮಾಡಿ ಎಂದು ಹೇಳಿದ್ದಾರೆ. ಈ ಮೂಲಕ ಸೋಂಕಿನ ಸರಪಳಿ ಬ್ರೇಕ್ ಮಾಡಿದರಷ್ಟೇ ದೇಶವನ್ನು ಈ ಮಹಾಮಾಆರಿಯಿಂದ ಕಾಪಾಡಲು ಸಾಧ್ಯ ಎಂದಿದ್ದಾರೆ. 

ಅಲ್ಲದೇ ಏರುತ್ತಿರುವ ಪ್ರಕರಣಗಳನ್ನು ತಗ್ಗಿಸಲು ಮೊದಲು ಯತ್ನಿಸಿ ಎಂದೂ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಸದ್ಯ ಎರಡು ಮಹತ್ವದ ಕ್ರಮ ಕೈಗೊಳ್ಳುವ ಅಗತ್ಯವಿದೆ. ಮೊದಲನೆಯದಾಗಿ ಸರ್ಕಾರ ದೇಶಾದ್ಯಂತ ಆರೋಗ್ಯ ಸುಧಾರಣೆಗೆ ಆಕ್ಸಿಜನ್, ಬೆಡ್‌ಗಳ ಸೂಕ್ತ ವ್ಯವಸ್ಥೆ ಹಾಗೂ ಎರಡನೆಯದ್ದಾಗಿ ಕೊರೋನಾ ಸೋಂಕಿನ ಸಂಖ್ಯೆ ಇಳಿಮುಖಗೊಳಿಸುವುದು. ಹೀಗಾದರಷ್ಟೇ ಕೊರೋನಾ ನಿಯಂತ್ರಿಸಲು ಸಾಧ್ಯವಾಗುತ್ತದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು