IAF Chopper Crash: ಅತ್ಯಾಧುನಿಕ ತಂತ್ರಜ್ಞಾನವಿದ್ದರೂ ಹೆಲಿಕಾಪ್ಟರ್ ಪತನವಾಗೋದಕ್ಕೆ ಕಾರಣವೇನು.?

IAF Chopper Crash: ಅತ್ಯಾಧುನಿಕ ತಂತ್ರಜ್ಞಾನವಿದ್ದರೂ ಹೆಲಿಕಾಪ್ಟರ್ ಪತನವಾಗೋದಕ್ಕೆ ಕಾರಣವೇನು.?

Published : Dec 10, 2021, 03:33 PM ISTUpdated : Dec 10, 2021, 03:42 PM IST

ಹೆಲಿಕಾಪ್ಟರ್‌ ದುರಂತದಲ್ಲಿ  ಜನರಲ್‌ ರಾವತ್‌, ಅವರ ಪತ್ನಿ ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 14 ಮಂದಿ ಪೈಕಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ದುರಂತದ ರಹಸ್ಯವನ್ನು ಹೊಂದಿದೆ ಎನ್ನಲಾಗಿರುವ ಬ್ಲ್ಯಾಕ್ ಬಾಕ್ಸ್‌’(Black Box)ಪತ್ತೆಯಾಗಿದೆ. ತನಿಖೆ ಆರಂಭಗೊಂಡಿದೆ. 

ನವದೆಹಲಿ (ಡಿ. 10): ಮೂರೂ ಸೇನಾ ಪಡೆಗಳ ನೇತೃತ್ವ ವಹಿಸಿದ್ದ ದೇಶದ ಮೊದಲ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bi[in Rawat) ಅವರು ಪತ್ನಿ ಹಾಗೂ ಸಿಬ್ಬಂದಿ ಜತೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash)ತಮಿಳುನಾಡಿನ (Tamilnadu) ಕೂನೂರು ಬಳಿ ಬುಧವಾರ ಭೀಕರವಾಗಿ ಪತನಗೊಂಡಿದೆ. 

ಜನರಲ್‌ ರಾವತ್‌, ಅವರ ಪತ್ನಿ ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 14 ಮಂದಿ ಪೈಕಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ.   ಹೆಲಿಕಾಪ್ಟರ್‌ ದುರಂತದ ರಹಸ್ಯವನ್ನು ಹೊಂದಿದೆ ಎನ್ನಲಾಗಿರುವ ಬ್ಲ್ಯಾಕ್ ಬಾಕ್ಸ್‌’(Black Box)ಪತ್ತೆಯಾಗಿದೆ. ತನಿಖೆ ಆರಂಭಗೊಂಡಿದೆ. ಇದರೊಂದಿಗೆ ಕಾಪ್ಟರ್‌ ಅಪಘಾತಕ್ಕೆ ನಿಖರ ಕಾರಣ ಪತ್ತೆಯಾಗುವ ಆಶಾಭಾವನೆ ಮೂಡಿದೆ.

2​015 ರಲ್ಲಿ ಲೆಫ್ಟಿನೆಂಟ್‌ ಜನರಲ್‌ ಆಗಿದ್ದ ಬಿಪಿನ್‌ ರಾವತ್‌ ಅವರು ಸೇನಾ ಸಿಬ್ಬಂದಿ ಜತೆ ಪ್ರಯಾಣಿಸುತ್ತಿದ್ದ ‘ಚೀತಾ’ ಹೆಲಿಕಾಪ್ಟರ್‌ ಪತನಗೊಂಡಿತ್ತು. ಈ ದುರ್ಘಟನೆಯಲ್ಲಿ ರಾವತ್‌ ಅವರು ಕೂದಲೆಳೆ ಅಂತರದಿಂದ ಪಾರಾಗಿದ್ದರು. ಭಾರತೀಯ ಸೇನೆಯಲ್ಲಿ ಸುದೀರ್ಘ 4 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಬಿಪಿನ್‌ ರಾವತ್‌ ತಮ್ಮ 20ನೇ ವಯಸ್ಸಿನಲ್ಲಿಯೇ ಸೇನೆ ಸೇರಿದ್ದರು. ಬಿಪಿನ್‌ ರಾವತ್‌ ಅವರನ್ನು ಡಿ.17ರ 2016ರಲ್ಲಿ ಭಾರತ ಸರ್ಕಾರ ಭೂ ಸೇನೆಯ 27ನೇ ಮುಖ್ಯಸ್ಥರನ್ನಾಗಿ ನೇಮಕ ಮಾಡಿತ್ತು. ಈ ಮೂಲಕ ಗೋರ್ಖಾ ಬ್ರಿಗೇಡ್‌ನಿಂದ ಅತ್ಯುನ್ನತ ಸ್ಥಾನಕ್ಕೇರಿದ ಮೂರನೇ ವ್ಯಕ್ತಿ ಎನಿಸಿಕೊಂಡಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದರೂ ಹೆಲಿಕಾಪ್ಟರ್ ಪತನವಾಗಿದ್ಹೇಗೆ..? ತಜ್ಞರು ಕೊಡುವ ಕಾರಣಗಳೇನು..? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?