IAF Chopper Crash: ಅತ್ಯಾಧುನಿಕ ತಂತ್ರಜ್ಞಾನವಿದ್ದರೂ ಹೆಲಿಕಾಪ್ಟರ್ ಪತನವಾಗೋದಕ್ಕೆ ಕಾರಣವೇನು.?

IAF Chopper Crash: ಅತ್ಯಾಧುನಿಕ ತಂತ್ರಜ್ಞಾನವಿದ್ದರೂ ಹೆಲಿಕಾಪ್ಟರ್ ಪತನವಾಗೋದಕ್ಕೆ ಕಾರಣವೇನು.?

Suvarna News   | Asianet News
Published : Dec 10, 2021, 03:33 PM ISTUpdated : Dec 10, 2021, 03:42 PM IST

ಹೆಲಿಕಾಪ್ಟರ್‌ ದುರಂತದಲ್ಲಿ  ಜನರಲ್‌ ರಾವತ್‌, ಅವರ ಪತ್ನಿ ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 14 ಮಂದಿ ಪೈಕಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ದುರಂತದ ರಹಸ್ಯವನ್ನು ಹೊಂದಿದೆ ಎನ್ನಲಾಗಿರುವ ಬ್ಲ್ಯಾಕ್ ಬಾಕ್ಸ್‌’(Black Box)ಪತ್ತೆಯಾಗಿದೆ. ತನಿಖೆ ಆರಂಭಗೊಂಡಿದೆ. 

ನವದೆಹಲಿ (ಡಿ. 10): ಮೂರೂ ಸೇನಾ ಪಡೆಗಳ ನೇತೃತ್ವ ವಹಿಸಿದ್ದ ದೇಶದ ಮೊದಲ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bi[in Rawat) ಅವರು ಪತ್ನಿ ಹಾಗೂ ಸಿಬ್ಬಂದಿ ಜತೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash)ತಮಿಳುನಾಡಿನ (Tamilnadu) ಕೂನೂರು ಬಳಿ ಬುಧವಾರ ಭೀಕರವಾಗಿ ಪತನಗೊಂಡಿದೆ. 

ಜನರಲ್‌ ರಾವತ್‌, ಅವರ ಪತ್ನಿ ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 14 ಮಂದಿ ಪೈಕಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ.   ಹೆಲಿಕಾಪ್ಟರ್‌ ದುರಂತದ ರಹಸ್ಯವನ್ನು ಹೊಂದಿದೆ ಎನ್ನಲಾಗಿರುವ ಬ್ಲ್ಯಾಕ್ ಬಾಕ್ಸ್‌’(Black Box)ಪತ್ತೆಯಾಗಿದೆ. ತನಿಖೆ ಆರಂಭಗೊಂಡಿದೆ. ಇದರೊಂದಿಗೆ ಕಾಪ್ಟರ್‌ ಅಪಘಾತಕ್ಕೆ ನಿಖರ ಕಾರಣ ಪತ್ತೆಯಾಗುವ ಆಶಾಭಾವನೆ ಮೂಡಿದೆ.

2​015 ರಲ್ಲಿ ಲೆಫ್ಟಿನೆಂಟ್‌ ಜನರಲ್‌ ಆಗಿದ್ದ ಬಿಪಿನ್‌ ರಾವತ್‌ ಅವರು ಸೇನಾ ಸಿಬ್ಬಂದಿ ಜತೆ ಪ್ರಯಾಣಿಸುತ್ತಿದ್ದ ‘ಚೀತಾ’ ಹೆಲಿಕಾಪ್ಟರ್‌ ಪತನಗೊಂಡಿತ್ತು. ಈ ದುರ್ಘಟನೆಯಲ್ಲಿ ರಾವತ್‌ ಅವರು ಕೂದಲೆಳೆ ಅಂತರದಿಂದ ಪಾರಾಗಿದ್ದರು. ಭಾರತೀಯ ಸೇನೆಯಲ್ಲಿ ಸುದೀರ್ಘ 4 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಬಿಪಿನ್‌ ರಾವತ್‌ ತಮ್ಮ 20ನೇ ವಯಸ್ಸಿನಲ್ಲಿಯೇ ಸೇನೆ ಸೇರಿದ್ದರು. ಬಿಪಿನ್‌ ರಾವತ್‌ ಅವರನ್ನು ಡಿ.17ರ 2016ರಲ್ಲಿ ಭಾರತ ಸರ್ಕಾರ ಭೂ ಸೇನೆಯ 27ನೇ ಮುಖ್ಯಸ್ಥರನ್ನಾಗಿ ನೇಮಕ ಮಾಡಿತ್ತು. ಈ ಮೂಲಕ ಗೋರ್ಖಾ ಬ್ರಿಗೇಡ್‌ನಿಂದ ಅತ್ಯುನ್ನತ ಸ್ಥಾನಕ್ಕೇರಿದ ಮೂರನೇ ವ್ಯಕ್ತಿ ಎನಿಸಿಕೊಂಡಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದರೂ ಹೆಲಿಕಾಪ್ಟರ್ ಪತನವಾಗಿದ್ಹೇಗೆ..? ತಜ್ಞರು ಕೊಡುವ ಕಾರಣಗಳೇನು..? 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್