IAF Chopper Crash: ಅತ್ಯಾಧುನಿಕ ತಂತ್ರಜ್ಞಾನವಿದ್ದರೂ ಹೆಲಿಕಾಪ್ಟರ್ ಪತನವಾಗೋದಕ್ಕೆ ಕಾರಣವೇನು.?

IAF Chopper Crash: ಅತ್ಯಾಧುನಿಕ ತಂತ್ರಜ್ಞಾನವಿದ್ದರೂ ಹೆಲಿಕಾಪ್ಟರ್ ಪತನವಾಗೋದಕ್ಕೆ ಕಾರಣವೇನು.?

Suvarna News   | Asianet News
Published : Dec 10, 2021, 03:33 PM ISTUpdated : Dec 10, 2021, 03:42 PM IST

ಹೆಲಿಕಾಪ್ಟರ್‌ ದುರಂತದಲ್ಲಿ  ಜನರಲ್‌ ರಾವತ್‌, ಅವರ ಪತ್ನಿ ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 14 ಮಂದಿ ಪೈಕಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ದುರಂತದ ರಹಸ್ಯವನ್ನು ಹೊಂದಿದೆ ಎನ್ನಲಾಗಿರುವ ಬ್ಲ್ಯಾಕ್ ಬಾಕ್ಸ್‌’(Black Box)ಪತ್ತೆಯಾಗಿದೆ. ತನಿಖೆ ಆರಂಭಗೊಂಡಿದೆ. 

ನವದೆಹಲಿ (ಡಿ. 10): ಮೂರೂ ಸೇನಾ ಪಡೆಗಳ ನೇತೃತ್ವ ವಹಿಸಿದ್ದ ದೇಶದ ಮೊದಲ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ (Bi[in Rawat) ಅವರು ಪತ್ನಿ ಹಾಗೂ ಸಿಬ್ಬಂದಿ ಜತೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash)ತಮಿಳುನಾಡಿನ (Tamilnadu) ಕೂನೂರು ಬಳಿ ಬುಧವಾರ ಭೀಕರವಾಗಿ ಪತನಗೊಂಡಿದೆ. 

ಜನರಲ್‌ ರಾವತ್‌, ಅವರ ಪತ್ನಿ ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 14 ಮಂದಿ ಪೈಕಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ.   ಹೆಲಿಕಾಪ್ಟರ್‌ ದುರಂತದ ರಹಸ್ಯವನ್ನು ಹೊಂದಿದೆ ಎನ್ನಲಾಗಿರುವ ಬ್ಲ್ಯಾಕ್ ಬಾಕ್ಸ್‌’(Black Box)ಪತ್ತೆಯಾಗಿದೆ. ತನಿಖೆ ಆರಂಭಗೊಂಡಿದೆ. ಇದರೊಂದಿಗೆ ಕಾಪ್ಟರ್‌ ಅಪಘಾತಕ್ಕೆ ನಿಖರ ಕಾರಣ ಪತ್ತೆಯಾಗುವ ಆಶಾಭಾವನೆ ಮೂಡಿದೆ.

2​015 ರಲ್ಲಿ ಲೆಫ್ಟಿನೆಂಟ್‌ ಜನರಲ್‌ ಆಗಿದ್ದ ಬಿಪಿನ್‌ ರಾವತ್‌ ಅವರು ಸೇನಾ ಸಿಬ್ಬಂದಿ ಜತೆ ಪ್ರಯಾಣಿಸುತ್ತಿದ್ದ ‘ಚೀತಾ’ ಹೆಲಿಕಾಪ್ಟರ್‌ ಪತನಗೊಂಡಿತ್ತು. ಈ ದುರ್ಘಟನೆಯಲ್ಲಿ ರಾವತ್‌ ಅವರು ಕೂದಲೆಳೆ ಅಂತರದಿಂದ ಪಾರಾಗಿದ್ದರು. ಭಾರತೀಯ ಸೇನೆಯಲ್ಲಿ ಸುದೀರ್ಘ 4 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಬಿಪಿನ್‌ ರಾವತ್‌ ತಮ್ಮ 20ನೇ ವಯಸ್ಸಿನಲ್ಲಿಯೇ ಸೇನೆ ಸೇರಿದ್ದರು. ಬಿಪಿನ್‌ ರಾವತ್‌ ಅವರನ್ನು ಡಿ.17ರ 2016ರಲ್ಲಿ ಭಾರತ ಸರ್ಕಾರ ಭೂ ಸೇನೆಯ 27ನೇ ಮುಖ್ಯಸ್ಥರನ್ನಾಗಿ ನೇಮಕ ಮಾಡಿತ್ತು. ಈ ಮೂಲಕ ಗೋರ್ಖಾ ಬ್ರಿಗೇಡ್‌ನಿಂದ ಅತ್ಯುನ್ನತ ಸ್ಥಾನಕ್ಕೇರಿದ ಮೂರನೇ ವ್ಯಕ್ತಿ ಎನಿಸಿಕೊಂಡಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದರೂ ಹೆಲಿಕಾಪ್ಟರ್ ಪತನವಾಗಿದ್ಹೇಗೆ..? ತಜ್ಞರು ಕೊಡುವ ಕಾರಣಗಳೇನು..? 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!