ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

ಗೋಧ್ರಾ ಗಲಭೆ ಕೇಸಲ್ಲಿ ಮೋದಿಗೆ ಕ್ಲೀನ್‌ಚಿಟ್‌, ತೀಸ್ತಾ ಸೆತಲ್ವಾಡೆ ಬಂಧನದ ಹಿಂದಿನ ಕಥೆಯೇನು?

Published : Jun 27, 2022, 05:15 PM ISTUpdated : Jun 27, 2022, 05:17 PM IST

ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಪ್ರಧಾನಿ ನರೇಂದ್ರ ಮೋದಿ (PM Modi)  ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2002ರಲ್ಲಿ ನಡೆದಿದ್ದ ಗೋಧ್ರೋತ್ತರ ಗಲಭೆ ಸಂಬಂಧ ಮೋದಿ ಹಾಗೂ ಇತರೆ 63 ಮಂದಿಗೆ ಎಸ್‌ಐಟಿ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ.

ಗಲಭೆಯ ಕುರಿತು ಸುಳ್ಳು ದಾಖಲೆ ಸೃಷ್ಟಿಮಾಡಿದ ಆರೋಪದ ಮೇಲೆ ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ (Teesta Setalwad) ಅವರನ್ನು  ತೀಸ್ತಾ ಅವರನ್ನು ಬಂಧಿಸಲಾಗಿದೆ.  ಗೋಧ್ರಾ ಹತ್ಯಾಕಂಡದಲ್ಲಿ ಉನ್ನತಮಟ್ಟದ ಸಂಚು ಅಡಗಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಸೆಟಲ್ವಾಡ್‌ ಸಹ ಒಬ್ಬರು. ಎಸ್‌ಐಟಿ ಪ್ರಧಾನಿ ಮೋದಿಗೆ ಕ್ಲೀನ್‌ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ನಕಲಿ ವರದಿಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ಸೆಟಲ್ವಾಡ್‌ ವಿರುದ್ಧ ಹರಿಹಾಯ್ದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾ ಗುಜರಾತ್‌ ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದ ಮಾಜಿ ಐಪಿಎಸ್‌ ಅಧಿಕಾರಿ ಆರ್‌.ಬಿ. ಶ್ರೀಕುಮಾರ್‌ ವಿರುದ್ಧವೂ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಧಿಕಾರಿಗಳಾದ ಸಂಜೀವ್‌ ಭಟ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಕಸ್ಟಡಿ ಸಾವಿನ ಅನ್ಯ ಪ್ರಕರಣದಲ್ಲಿ ಭಟ್‌ ದೋಷಿಯಾಗಿದ್ದು, ಜೈಲಲ್ಲಿದ್ದಾರೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more