IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

Published : Dec 09, 2021, 11:38 AM IST

ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

 

ನವದೆಹಲಿ(ಡಿ.09): ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಭಾರತೀಯ ವಾಯುಪಡೆ, ‘ಭದ್ರತಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ನಿರ್ದೇಶಕ ಸಿಬ್ಬಂದಿಯಾಗಿದ್ದ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಸಂಭವಿಸಿದ ದುರಂತದಲ್ಲಿ ಬದುಕುಳಿದ ಏಕಮಾತ್ರ ಸಿಬ್ಬಂದಿ. ಆದರೆ ಅವರು ಗಂಭೀರ ಪ್ರಮಾಣದ ಸುಟ್ಟಗಾಯಗಳಿಂದ ಜರ್ಜರಿತರಾಗಿದ್ದು, ಸದ್ಯ ಅವರಿಗೆ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದೆ.

2020ರಲ್ಲಿ ಹಾರಾಟದ ವೇಳೆ ತಮ್ಮ ಲಘು ಯುದ್ಧ ವಿಮಾನ ತೇಜಸ್‌ ಯುದ್ಧ ವಿಮಾನವನ್ನು ತುರ್ತಾಗಿ ರಕ್ಷಿಸಿದ ಹಿನ್ನೆಲೆಯಲ್ಲಿ ಇದೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಕ್ಯಾ. ವರುಣ್‌ ಸಿಂಗ್‌ ಅವರು ಶೌರ್ಯಚಕ್ರ ಪುರಸ್ಕಾರಕ್ಕೆ ಭಾಜನರಾಗಿದ್ದರು.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more