ಮುಂಬೈ ಲಾಕ್‌ಡೌನ್‌ ಭೀತಿ; ತವರಿನತ್ತ ಮುಖ ಮಾಡಿದ ಕನ್ನಡಿಗರು!

Apr 8, 2021, 6:08 PM IST

ಉಡುಪಿ(ಏ.08) ಕೊರೋನಾ ವೈರಸ್ ಹೆಚ್ಚಾದ ಕಾರಣ ಮುಂಬೈನಲ್ಲಿ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಇದೀಗ ಸಂಪೂರ್ಣ ಲಾಕ್‌ಡೌನ್ ಆತಂಕ ಕಾರ್ಮಿಕರಿಗೆ ಕಾಡುತ್ತಿದೆ. ಹೀಗಾಗಿ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿಗೆ ಮರಳುತ್ತಿದ್ದಾರೆ. ಇದೀಗ ಮುಂಬೈನಲ್ಲಿ ನೆಲೆಸಿರುವ ಕನ್ನಡಿಗರು ತವರಿಗೆ ವಾಪಾಸ್ಸಾಗುತ್ತಿದ್ದಾರೆ. ಉಡುಪಿಯಲ್ಲಿ ಮುಂಬೈನಿಂದ ಆಗಮಿಸುತ್ತಿರುವರ ಸಂಖ್ಯೆ ಹೆಚ್ಚಾಗುತ್ತಿದೆ.