76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

Published : Aug 14, 2023, 09:03 AM IST

76ನೇ ಸ್ವಾತಂತ್ರ್ಯ  ದಿನಾಚರಣಗೆ ಕ್ಷಣಗಣನೆ ಆರಂಭವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದೆ. ಸೋಶಿಯಲ್ ಮೀಡಿಯಾ ಪ್ರೋಫೈಲ್‌ಗೆ ತ್ರಿವಣ  ಚಿತ್ರ ಹಾಕುವಂತೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ.
 

76ನೇ  ಸ್ವಾತಂತ್ರ್ಯೋತ್ಸವನ್ನ ಸಂಭ್ರಮದ ಆಚರಣೆಗೆ ಇಡೀ ದೇಶವೇ ಸಜ್ಜಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಗೆ (Independence Day) ಒಂದು ದಿನ ಬಾಕಿ ಇರುವಾಗಲೇ ಮನೆ ಮನಗಳಲ್ಲೂ ತ್ರಿವರ್ಣ ರಂಗು ಜೋರಾಗಿದೆ. ಪ್ರಧಾನಿ ಮೋದಿ(Pm Modi) ಹರ್ ಘರ್ ತಿರಂಗಾ ಅಭಿಯಾನಕ್ಕೆ(Har Ghar Tiranga campaign) ಕರೆ ಕೊಟ್ಟಿದ್ದು. ಭಾನುವಾರದಿಂದ  ಮನೆ ಮನೆಗಳಲ್ಲೂ ತ್ರಿವರ್ಣ ಧ್ವಜ(tricolor flag) ಹಾರಾಡುತ್ತಿದೆ. ಪ್ರಧಾನಿ ಮೋದಿ ಹರ್‌ ಘರ್ ತಿರಂಗಾ ಅಭಿಯಾನಕ್ಕೆ ಕರೆ ಕೊಟ್ಟ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ತಿರಂಗಾ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಗುಜರಾತ್‌ನ ಅಹಮದಾಬಾದ್ನಲ್ಲಿ ಅಮಿತ್ ಶಾ ತಿರಂಗಾ ಅಭಿಯಾನಕ್ಕೆ  ಚಾಲನೆ ಕೊಟ್ಟರು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಮನೆ ಮನೆಗಳಲ್ಲಿ ಭಾರತ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಜಮ್ಮು ಕಾಶ್ಮೀರ ಗಡಿಯಲ್ಲಿ ಯೋಧರು ಕೂಡ ಹರ್‌ ಘರ್ ತಿರಂಗಾ ಅಭಿಯಾನದ ಮೂಲಕ ದೇಶ ಪ್ರೇಮ ಮೆರೆದ್ರು. ಮನೆ ಮನೆಯಲ್ಲಿ ತಿರಂಗ ಹಾರಾಟದ ಜೊತೆಗೆ ಪ್ರತಿಯೊಬ್ಬರೂ ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳಿಗೆ ತ್ರಿವರ್ಣ ಧ್ವಜ ಹಾಕಿಕೊಳ್ಳಲು ಮೋದಿ ಕರೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ ಸ್ವತಃ ಪ್ರಧಾನಿ ಮೋದಿ ತಮ್ಮ ಫೇಸ್ಬುಕ್ ಮತ್ತು ಟ್ವಿಟರ್ ಖಾತೆಗಳಿಗೆ ತ್ರಿವರ್ಣ ಧ್ವಜದ ಫೋಟೋ ಹಾಕಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಗಳನ್ನು ಬದಲಾಯಿಸೋಣ ಮತ್ತು ದೇಶದೊಂದಿಗೆ ನಮ್ಮ ಸಂಬಂಧವನ್ನು ಬಲಪಡಿಸೋಣ ಎಂದು ಟ್ವಿಟರ್ನಲ್ಲಿ ದೇಶಭಕ್ತರಿಗೆ ಕರೆಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಕೇರಳದ ಉಲ್ಕೆ ವಿಜ್ಞಾನಿ ಹೆಸರಿನಲ್ಲಿದೆ ಚಿಕ್ಕ ಗ್ರಹ, Asianet Dialogueನಲ್ಲಿ ರಹಸ್ಯ ಬಿಚ್ಚಿಟ್ಟ ಖಗೋಳ ಶಾಸ್ತ್ರಜ್ಞ!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more