ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

Published : Jul 11, 2023, 12:55 PM IST

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತು
ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ 
ರಾಜಧಾನಿ ದೆಹಲಿಯಲ್ಲಿ 40 ವರ್ಷಗಳ ದಾಖಲೆ ಮಳೆ
 

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತಾಗಿದೆ. ಮಳೆ (Rain) ಬಿಟ್ಟು ಬಿಡದಂತೆ ಅಬ್ಬರಿಸುತ್ತಿದೆ. ಉತ್ತರ ಭಾರತ(North India) ಈಗ ಜಲಭಾರತವಾಗಿದೆ. ಕಂಡಲ್ಲೆಲ್ಲ ನೀರು. ಅದ್ರಲ್ಲೂ, ಪಂಚಾಬ್, ಹರಿಯಾಣ, ದೆಹಲಿ, ಹಿಮಾಚಲ ಪ್ರದೇಶ(Himachala pradesh) ಮತ್ತು ಉತ್ತರಾಖಂಡ ರಾಜ್ಯಗಳು ನಿರಂತರ ಮಳೆಗೆ ಅತ್ಯಂತ ಸಂಕಷ್ಟದ ಸುಳಿಗೆ ಸಿಲುಕಿವೆ. ಉತ್ತರ ಭಾತರದಲ್ಲಿ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಕಳೆದ ಕೆಲ ದಿನಗಳಿಂಬಿ ಬಿಟ್ಟು ಬಿಡದಂತೆ ಮಳೆ ಸುರಿದ ಪರಿಣಾಮ, ಇಡೀ ಉತ್ತರ ಭಾರತ ಜಲದಿಗ್ಬಂಧನಕ್ಕೊಳಗಾಗಿದೆ. ಉತ್ತರ ಭಾರತದ ಐದು ರಾಜ್ಯಗಳಲ್ಲಿ  ಪರಿಸ್ಥಿತಿ ಹೇಗಾಗಿದೆ ಎಂದ್ರೆ, ನದಿ, ಹಳ್ಳಕೊಳ್ಳಗಳೆಲ್ಲ ಏಕಾಗಿವೆ. ಈ ರಾಜ್ಯಗಳಲ್ಲಿ ಅನೇಕ ಗ್ರಾಮಗಳು ದ್ವೀಪಗಳಾಗಿವೆ. ದೇಶದ ರಾಜಧಾನಿ ದೆಹಲಿ  ಸುತ್ತ ಮುತ್ತ ನಿರಂತರ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಯಮುನಾ ನದಿ ದೊಡ್ಡ ಪ್ರಮಾಣದಲ್ಲಿ ಉಕ್ಕಿ ಹಿರಿಯುತ್ತಿದೆ. ರಾಜಧಾನಿ ದೆಹಲಿ ಜನರ ಜೀವನ ಸಂಕಷ್ಟದಲ್ಲಿ ಸಿಲುಕಿದೆ. ದೆಹಲಿಯ ರಸ್ತೆಗಳು, ಅಂಡರ್ಪಾಸ್ಗಳು, ಮಾರುಕಟ್ಟೆ ಮತ್ತು ಆಸ್ಪತ್ರೆಗಳಲ್ಲಿ ಪ್ರವಾಹ ತಾಂಡವವಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ದಲಿತ ಹುಡುಗನ ಬೆಳವಣಿಗೆ ಸಹಿಸದೇ ಕೊಲೆ: ಚಕ್ರವರ್ತಿ ಸೂಲಿಬೆಲೆ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more