RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

Published : Mar 02, 2024, 11:15 AM ISTUpdated : Mar 02, 2024, 11:16 AM IST

ಡಾ.ಹೆಡಗೇವಾರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ
RSS ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್
ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಲೋಕಾರ್ಪಣೆ

ದೆಹಲಿಯಲ್ಲಿ RSS ಸಂಸ್ಥಾಪಕ ಡಾ.ಹೆಡಗೇವಾರ್ ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ(Man of the Millennium book) ಬಿಡುಗಡೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ  ವ್ಯಕ್ತಿ ನಿರ್ಮಾಣ, ಸಮಾಜ ನಿರ್ಮಾಣ, ರಾಷ್ಟ್ರ ನಿರ್ಮಾಣ ಹಾಗು ಚರಿತ್ರೆಯ ನಿರ್ಮಾಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮುಂದಿನ ಸಾಲಿನಲ್ಲಿರುತ್ತೆ ಎಂದು ಏಷ್ಯಾನೆಟ್ ನೆಟ್‌ವರ್ಕ್ ಚೇರ್ಮನ್ ರಾಜೇಶ್ ಕಾಲ್ರಾ ಅಭಿಪ್ರಾಯಪಟ್ರು. ನವದೆಹಲಿಯ(Dlehi) ಸಿಎಂ ಬಾಲಯೋಗಿ ಆಡಿಟೋರಿಯಂನಲ್ಲಿ RSS ಸಂಸ್ಥಾಪಕ ಡಾ.ಹೆಡಗೇವಾರ್(DR. Keshav Baliram hedgewar) ಮ್ಯಾನ್ ಆಫ್ ದಿ ಮಿಲೇನಿಯಾ ಡಾ.ಹೆಡಗೇವಾರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನೆರವೇರಿತು.ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಸೀರ್ ಡಾ.ಹೆಡಗೇವಾರ್ ಅವರ ಜೀವನಚರಿತ್ರೆಯನ್ನು ಬಿಡುಗಡೆ ಮಾಡಿದ್ರು. ಇದೇ ವೇಳೆ ಮಾತನಾಡಿದ ಏಷ್ಯಾನೆಟ್ ನೆಟ್ವರ್ಕ್ ಚೇರ್ಮನ್ ರಾಜೇಶ್ ಕಾಲ್ರಾ  RSS ಸದಾ ರಾಷ್ಟ್ರದ ಮುಖ್ಯ ಅನ್ನುತ್ತೆ. ವ್ಯಕ್ತಿ, ಚರಿತ್ರೆ ಹಾಗೂ ಸಮಾಜ ನಿರ್ಮಾಣದಲ್ಲಿ ಸದಾ ಮುಂದಿರುತ್ತೆ ಅಂದ್ರು. ಇನ್ನು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿದ್ರು. ಡಾ. ಹೆಡಗೇವಾರ್ ಅವರ ದೇಶಭಕ್ತಿ ಎಂಥದ್ದು ಎಂದ್ರೆ ಈ ರಾಷ್ಟ್ರದಲ್ಲಿ ನಾವು ಹುಟ್ಟಿದ್ದೇವೆ ಇದು ನಮ್ಮ ಕರ್ತವ್ಯ ಎನ್ನುತ್ತಿದ್ದರು. ಅವರೊಬ್ಬ ರಾಜಿಯಾಗದ, ಕ್ರಿಯಾಶೀಲ ದೇಶಭಕ್ತ. ಇನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಎರಡು ಬಾರಿ ಜೈಲಿಗೆ ಹೋಗಿದ್ರು ಅಂದ್ರು. ರಾಜ್ಯಪಾಲ ನ್ಯಾ.ಅಬ್ದುಲ್ ನಸೀರ್ ಸಹ ಮಾತನಾಡಿ, ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತುಂಬಾ ಖುಷಿಯಾಗುತ್ತಿದೆ. ಡಾ.ಹೆಡಗೇವಾರ್ ಒಬ್ಬ ಮಹಾನ್ ರಾಷ್ಟ್ರಭಕ್ತ. ತಾಯಿನಾಡಿಗಾಗಿ ಅವರು ಬಾಲ್ಯದಿಂದಲೇ ಧ್ವನಿ ಎತ್ತಿದ್ದವರು ಎಂದು ಹಾಡಿ ಹೊಗಳಿದ್ರು.

ಇದನ್ನೂ ವೀಕ್ಷಿಸಿ:  ಬಸವನಗುಡಿ ಸಂಭ್ರಮ: ಫುಡ್, ಫನ್ ಆ್ಯಂಡ್ ಫ್ಯಾಷನ್ ಫೆಸ್ಟಿವಲ್‌ಗೆ ಭರ್ಜರಿ ರೆಸ್ಪಾನ್ಸ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more