RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

Published : Mar 02, 2024, 11:15 AM ISTUpdated : Mar 02, 2024, 11:16 AM IST

ಡಾ.ಹೆಡಗೇವಾರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ
RSS ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್
ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಲೋಕಾರ್ಪಣೆ

ದೆಹಲಿಯಲ್ಲಿ RSS ಸಂಸ್ಥಾಪಕ ಡಾ.ಹೆಡಗೇವಾರ್ ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ(Man of the Millennium book) ಬಿಡುಗಡೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ  ವ್ಯಕ್ತಿ ನಿರ್ಮಾಣ, ಸಮಾಜ ನಿರ್ಮಾಣ, ರಾಷ್ಟ್ರ ನಿರ್ಮಾಣ ಹಾಗು ಚರಿತ್ರೆಯ ನಿರ್ಮಾಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮುಂದಿನ ಸಾಲಿನಲ್ಲಿರುತ್ತೆ ಎಂದು ಏಷ್ಯಾನೆಟ್ ನೆಟ್‌ವರ್ಕ್ ಚೇರ್ಮನ್ ರಾಜೇಶ್ ಕಾಲ್ರಾ ಅಭಿಪ್ರಾಯಪಟ್ರು. ನವದೆಹಲಿಯ(Dlehi) ಸಿಎಂ ಬಾಲಯೋಗಿ ಆಡಿಟೋರಿಯಂನಲ್ಲಿ RSS ಸಂಸ್ಥಾಪಕ ಡಾ.ಹೆಡಗೇವಾರ್(DR. Keshav Baliram hedgewar) ಮ್ಯಾನ್ ಆಫ್ ದಿ ಮಿಲೇನಿಯಾ ಡಾ.ಹೆಡಗೇವಾರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನೆರವೇರಿತು.ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಸೀರ್ ಡಾ.ಹೆಡಗೇವಾರ್ ಅವರ ಜೀವನಚರಿತ್ರೆಯನ್ನು ಬಿಡುಗಡೆ ಮಾಡಿದ್ರು. ಇದೇ ವೇಳೆ ಮಾತನಾಡಿದ ಏಷ್ಯಾನೆಟ್ ನೆಟ್ವರ್ಕ್ ಚೇರ್ಮನ್ ರಾಜೇಶ್ ಕಾಲ್ರಾ  RSS ಸದಾ ರಾಷ್ಟ್ರದ ಮುಖ್ಯ ಅನ್ನುತ್ತೆ. ವ್ಯಕ್ತಿ, ಚರಿತ್ರೆ ಹಾಗೂ ಸಮಾಜ ನಿರ್ಮಾಣದಲ್ಲಿ ಸದಾ ಮುಂದಿರುತ್ತೆ ಅಂದ್ರು. ಇನ್ನು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿದ್ರು. ಡಾ. ಹೆಡಗೇವಾರ್ ಅವರ ದೇಶಭಕ್ತಿ ಎಂಥದ್ದು ಎಂದ್ರೆ ಈ ರಾಷ್ಟ್ರದಲ್ಲಿ ನಾವು ಹುಟ್ಟಿದ್ದೇವೆ ಇದು ನಮ್ಮ ಕರ್ತವ್ಯ ಎನ್ನುತ್ತಿದ್ದರು. ಅವರೊಬ್ಬ ರಾಜಿಯಾಗದ, ಕ್ರಿಯಾಶೀಲ ದೇಶಭಕ್ತ. ಇನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಎರಡು ಬಾರಿ ಜೈಲಿಗೆ ಹೋಗಿದ್ರು ಅಂದ್ರು. ರಾಜ್ಯಪಾಲ ನ್ಯಾ.ಅಬ್ದುಲ್ ನಸೀರ್ ಸಹ ಮಾತನಾಡಿ, ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತುಂಬಾ ಖುಷಿಯಾಗುತ್ತಿದೆ. ಡಾ.ಹೆಡಗೇವಾರ್ ಒಬ್ಬ ಮಹಾನ್ ರಾಷ್ಟ್ರಭಕ್ತ. ತಾಯಿನಾಡಿಗಾಗಿ ಅವರು ಬಾಲ್ಯದಿಂದಲೇ ಧ್ವನಿ ಎತ್ತಿದ್ದವರು ಎಂದು ಹಾಡಿ ಹೊಗಳಿದ್ರು.

ಇದನ್ನೂ ವೀಕ್ಷಿಸಿ:  ಬಸವನಗುಡಿ ಸಂಭ್ರಮ: ಫುಡ್, ಫನ್ ಆ್ಯಂಡ್ ಫ್ಯಾಷನ್ ಫೆಸ್ಟಿವಲ್‌ಗೆ ಭರ್ಜರಿ ರೆಸ್ಪಾನ್ಸ್

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more