ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

Published : Mar 28, 2022, 12:48 PM IST

ಹಿಜಾಬ್ ಕುರಿತಾಗಿ ಕರ್ನಾಟಕ ಹೈಕೋರ್ಟ್ ತೀರ್ಪು

ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯಮಂಡಳಿ

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಅರ್ಜಿ

ಬೆಂಗಳೂರು (ಮಾ. 28): ಇಸ್ಲಾಂನಲ್ಲಿ (Islam) ಹಿಜಾಬ್ (Hijab) ಹೆಣ್ಣುಮಕ್ಕಳಿಗೆ ಅವಿಭಾಜ್ಯ ಅಂಗವಲ್ಲ. ಆ ಕಾರಣಕ್ಕಾಗಿ ಶಾಲೆಗೆ ಸರ್ಕಾರ ಸೂಚಿಸಿರುವ ಸಮವಸ್ತ್ರವೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ತೀರ್ಪಿನ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ (All India Muslim Personal Law Board) ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿರುವ 2ನೇ ಅರ್ಜಿ ಇದಾಗಿದೆ. ತೀರ್ಪಿನಲ್ಲಿ ಕುರಾನ್ ಬಗ್ಗೆ ತಪ್ಪಾದಾ ವ್ಯಾಖ್ಯಾನ ಮಾಡಲಾಗಿದೆ. ಹದೀಸ್ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್ ಕಾನೂನುಗಳನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗಿದೆ ಹಾಗಾಗಿ ಈ ಬಗ್ಗೆ ಸೂಕ್ತವಾದ ವಿಚಾರಣೆ ನಡೆಸಿ ಹೈಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದೆ.

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

ಇದಕ್ಕೂ ಮುನ್ನ ಕೇರಳದ (Kerala) ಮುಸ್ಲಿಂ ಸಂಘಟನೆಯೊಂದು ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿತ್ತು. ಸಮಸ್ತ ಕೇರಳ ಜಮಾಯತ್ ಉಲ್ ಉಲಾಮಾ ಸಂಘಟನೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಕುರಾನ್ ನಲ್ಲಿ  ಮಹಿಳೆಯು ಕುತ್ತಿಗೆ, ತಲೆ ಮುಚ್ಚಿಕೊಳ್ಳುವುದು ಕಡ್ಡಾಯ ಎಂದು ಹೇಳಿದೆ ಎಂದು ಕೇರಳದ ಸಂಘಟನೆ ಅರ್ಜಿಯಲ್ಲಿ ತಿಳಿಸಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more