ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

ಹಿಜಾಬ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ!

Published : Mar 28, 2022, 12:48 PM IST

ಹಿಜಾಬ್ ಕುರಿತಾಗಿ ಕರ್ನಾಟಕ ಹೈಕೋರ್ಟ್ ತೀರ್ಪು

ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯಮಂಡಳಿ

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಅರ್ಜಿ

ಬೆಂಗಳೂರು (ಮಾ. 28): ಇಸ್ಲಾಂನಲ್ಲಿ (Islam) ಹಿಜಾಬ್ (Hijab) ಹೆಣ್ಣುಮಕ್ಕಳಿಗೆ ಅವಿಭಾಜ್ಯ ಅಂಗವಲ್ಲ. ಆ ಕಾರಣಕ್ಕಾಗಿ ಶಾಲೆಗೆ ಸರ್ಕಾರ ಸೂಚಿಸಿರುವ ಸಮವಸ್ತ್ರವೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ತೀರ್ಪಿನ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ (All India Muslim Personal Law Board) ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿರುವ 2ನೇ ಅರ್ಜಿ ಇದಾಗಿದೆ. ತೀರ್ಪಿನಲ್ಲಿ ಕುರಾನ್ ಬಗ್ಗೆ ತಪ್ಪಾದಾ ವ್ಯಾಖ್ಯಾನ ಮಾಡಲಾಗಿದೆ. ಹದೀಸ್ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್ ಕಾನೂನುಗಳನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗಿದೆ ಹಾಗಾಗಿ ಈ ಬಗ್ಗೆ ಸೂಕ್ತವಾದ ವಿಚಾರಣೆ ನಡೆಸಿ ಹೈಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದೆ.

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

ಇದಕ್ಕೂ ಮುನ್ನ ಕೇರಳದ (Kerala) ಮುಸ್ಲಿಂ ಸಂಘಟನೆಯೊಂದು ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿತ್ತು. ಸಮಸ್ತ ಕೇರಳ ಜಮಾಯತ್ ಉಲ್ ಉಲಾಮಾ ಸಂಘಟನೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಕುರಾನ್ ನಲ್ಲಿ  ಮಹಿಳೆಯು ಕುತ್ತಿಗೆ, ತಲೆ ಮುಚ್ಚಿಕೊಳ್ಳುವುದು ಕಡ್ಡಾಯ ಎಂದು ಹೇಳಿದೆ ಎಂದು ಕೇರಳದ ಸಂಘಟನೆ ಅರ್ಜಿಯಲ್ಲಿ ತಿಳಿಸಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more