26/11 ದಾಳಿಯ ಮಾಸ್ಟರ್ ಮೈಂಡ್ ಸತ್ಯ ಕಕ್ಕುತ್ತಾನಾ?

26/11 ದಾಳಿಯ ಮಾಸ್ಟರ್ ಮೈಂಡ್ ಸತ್ಯ ಕಕ್ಕುತ್ತಾನಾ?

Published : Apr 12, 2025, 08:24 PM ISTUpdated : Apr 12, 2025, 09:11 PM IST

26/11ರ ಮುಂಬೈ ದಾಳಿಯ ಪ್ರಮುಖ ಉಗ್ರ ತಹಾವುರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದೆ. ಈ ಹಿಂದೆ ತಪ್ಪಿಸಿಕೊಂಡಿದ್ದ ಮಾಸ್ಟರ್ ಮೈಂಡ್ ಈಗ ಭಾರತದ ಕೈಗೆ ಸಿಕ್ಕಿಬಿದ್ದಿದ್ದು, ಭಾರತದ ರಣತಂತ್ರವೇನು ಎಂಬುದನ್ನು ಕಾದು ನೋಡಬೇಕಿದೆ.

ಅದು ಭಾರತದ ಪಾಲಿಗೆ ಆರದ ಗಾಯ. ಕೋಟಿ ಕೋಟಿ ಭಾರತೀಯರ ಎದೆಯಲ್ಲಿ ಕ್ರೋಧಾಗ್ನಿ ಹೊತ್ತಿಸಿದ ಗಾಯ. ಅವತ್ತು ಆ ದಾರುಣ ದಾಳಿ ನಡೆಸಿದ ರಾಕ್ಷಸರನ್ನ ಭಾರಯ ಯಾವತ್ತೋ ಯಮಸದನಕ್ಕೆ ಕಳಿಸಿದೆ. ಆದ್ರೆ, ಈ ರಣರಕ್ಕಸ ದಾಳಿಯ ಹಿಂದಿದ್ದ ಮಾಸ್ಟರ್ ಮೈಂಡ್ ಒಬ್ಬ ಮಾತ್ರ, ಬಚಾವ್ ಆಗಿಬಿಟ್ಟಿದ್ದ. ಈಗ ಅವನ ತಲೆಗೇ ಗಂಡಾಂತರ ಎದುರಾಗಿದೆ. ಅಷ್ಟಕ್ಕೂ ದೂರದೇಶದಲ್ಲೆಲ್ಲೋ ಬೆಚ್ಚಗಿದ್ದ ಉಗ್ರಸರ್ಪನಾ, ಅದ್ಯಾವ ಗರುಡಮಂತ್ರ ಪಠಿಸಿ ಭಾರತ ಬರಮಾಡಿಕೊಳ್ತು. ಬಂದಿರೋ ಉಗ್ರನನ್ನ ಏನು ಮಾಡಲಿದೆ ಭಾರತ?  

ನಾವು ನಿಮಗೆ ಹೇಳ್ಬೇಕು ಅಂತಿರೋದು ಇದೇ ಕತೆ. ಈ ಎರಡು ಶಕ್ತಿಗಳು ಒಟ್ಟಾಗಿ ಹೇಗೆ ಹೊಸ ಚರಿತ್ರೆ ಸೃಷ್ಟಿಸಿವೆ ಅನ್ನೋದನ್ನ ಕೇಳೋದೇ ರೋಮಾಂಚಕವಾಗಿದೆ. ಭಾರತ ಈಗ ಬದಲಾಗಿದೆ. ಎದುರಾಳಿ ಒಂದು ಹೆಜ್ಜೆ ಇಡೋ ಮೊದಲೇ, ಭಾರತದ ಅವನ ಕಾಲನ್ನೇ ಕಟ್ಟಿಹಾಕೋ ಮಟ್ಟಕ್ಕೆ ಬಲಿಷ್ಠವಾಗಿದೆ. ಈ ಬದಲಾವಣೆಗೆ ಕಾರಣವಾಗಿದ್ದು, ಆ ಇಬ್ಬರು. ಭಾರತ ನಡೆಸಿದ ಆ ಸರ್ಜಿಕಲ್ ಸ್ಟ್ರೈಕ್, ಭಾರತದ ಶಕ್ತಿ ಎಂಥದ್ದು ಅನ್ನೋದನ್ನ ಇಡೀ ಜಗತ್ತಿಗೆ ಹೊಸದಾಗಿ ಪರಿಚಯಿಸಿತ್ತು. ಆ ಶಕ್ತಿ ಪ್ರದರ್ಶನದ ಹಿಂದೆ ಇದ್ದದ್ದು, ಇದೇ ಅಜಿತ್ ದೋವಲ್. ಭಾರತದ ವಿದೇಶಾಂಗ ನೀತಿ, ಈಗ ಬದಲಾಗಿದೆ. ಅದೇ ಥರ ದೇಶದ ಗಡಿಯಲ್ಲೂ, ಗಡಿಯೊಳಗೂ ಭಾರತ ಬಲಿಷ್ಠವಾಗಿದೆ. ಅದಕ್ಕೆ ಸಣ್ಣ ಉದಾಹರಣೆ 26/11 ದಾಳಿಯ ಉಗ್ರ ತಹಾವುರ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದ್ದು, ವಿಚಾರಣೆ ಆರಂಭವಾಗಿದೆ. 
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more