IAF Chopper Crash: ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ತಜ್ಞರು ಹೇಳೋದೇನು?

IAF Chopper Crash: ನೀಲಗಿರಿ ಪರ್ವತ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ತಜ್ಞರು ಹೇಳೋದೇನು?

Published : Dec 08, 2021, 09:41 PM ISTUpdated : Dec 08, 2021, 10:07 PM IST

*ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ನಿಧನ
*ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು 
*ತಮಿಳುನಾಡು ದುರಂತ ನಡೆದ ವಾಯುಮಾರ್ಗದ ಬಗ್ಗೆ ತಜ್ಞರ ವಿಶ್ಲೇಷಣೆ!

ವೆಲ್ಲಿಂಗ್ಟನ್(ಡಿ.08): ತಮಿಳುನಾಡಿನ ಕುನ್ನೂರು ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ (CDS General Bipin Rawat), ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಈ ಅಪಘಾತದಲ್ಲಿ  ಗಂಭೀರ ಗಾಯಗೊಂಡಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Group Captain Varun Singh) ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ಟ್ವೀಟ್‌ನಲ್ಲಿ (IAF Tweet) ತಿಳಿಸಿದೆ.

IAF Chopper Crash: ಬದುಕುಳಿದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಶೌರ್ಯಚಕ್ರ ಪ್ರಶಸ್ತಿ ವಿಜೇತ!

ಈ ಘಟನೆಯಿಂದ ಇಡೀ ದೇಶವೇ ದಿಗ್ಭ್ರಾಂತಗೊಂಡಿದೆ. ಈ ಬೆನ್ನಲ್ಲೇ ಉನ್ನತ ಅಧಿಕಾರಿಗಳು ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವಾಗ ಪಾಲಿಸಬೇಕಾದ ಪ್ರೋಟೋಕಾಲ್‌ (Protocol) ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ನೀಲಗಿರಿ ಪರ್ವತ ( Nilagiri Hills) ಈ ಹಾದಿಯಲ್ಲಿ ಹೆಲಿಕಾಪ್ಟರ್‌ ತೆರಳಿದ್ದೇ ತಪ್ಪಾಯ್ತಾ? ಎಂಬ ಬಗ್ಗೆ ತಜ್ಞರು (Experts) ವಿಶ್ಲೇಷಿಸಿದ್ದು ಹಲವು ಮಾಹಿತಿ ಬಹಿರಂಗಪಡಿಸಿದ್ದಾರೆ. ಪಶ್ಮಿಮ ಘಟ್ಟ ಆರಂಭವಾಗುವ ಪ್ರದೇಶದಲ್ಲಿ ಸದಾ ದಟ್ಟ ಮಂಜು ಆವರಿಸಿರುತ್ತದೆ. ಹಾಗಾಗಿ ಈ ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪ್ರಯಾಣ ಕಷ್ಟಕರ ಎಂದು ತಜ್ಞರು ಹೇಳಿದ್ದಾರೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more