ಅಕ್ರಮ ಬಯಲಿಗೆಳೆದ ವರದಿಗಾರ್ತಿ ಮೇಲೆ ಪ್ರಕರಣ: ಪತ್ರಕರ್ತರಿಂದ ಕೇರಳದಲ್ಲಿ ಪ್ರತಿಭಟನೆ

ಅಕ್ರಮ ಬಯಲಿಗೆಳೆದ ವರದಿಗಾರ್ತಿ ಮೇಲೆ ಪ್ರಕರಣ: ಪತ್ರಕರ್ತರಿಂದ ಕೇರಳದಲ್ಲಿ ಪ್ರತಿಭಟನೆ

Published : Jun 12, 2023, 01:25 PM IST

ಮಹಾರಾಜ್ ಕಾಲೇಜಿನಲ್ಲಿ ನಡೆದಿರುವ ಅಥಿತಿ ಉಪನ್ಯಾಸಕರ ನೇಮಕಾತಿಯಲ್ಲಿ ಮಾರ್ಕ್‌ಶೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಬಿಟ್ಟು ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ನ್ಯೂಸ್ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮಹಾರಾಜ್ ಕಾಲೇಜಿನಲ್ಲಿ ನಡೆದಿರುವ ಅಥಿತಿ ಉಪನ್ಯಾಸಕರ ನೇಮಕಾತಿಯಲ್ಲಿ ಮಾರ್ಕ್‌ಶೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಬಿಟ್ಟು ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ನ್ಯೂಸ್ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಹಲವು ರಾಜಕೀಯ ಮುಖಂಡರು ಹಾಗೂ ಪತ್ರಕರ್ತರ ಸಂಘಟನೆ  ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನೆ ಖಂಡಿಸಿ ಇಂದು ಪತ್ರಕರ್ತರು ಕೇರಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. 

ಎರ್ನಾಕುಲಂ ಮಹಾರಾಜಾ ಕಾಲೇಜಿನಲ್ಲಿ ನಡೆದಿರುವ ಅತಿಥಿ ಉಪನ್ಯಾಸಕರ ನೇಮಕ ಅಕ್ರಮ ಕುರಿತು ಏಷ್ಯಾನೆಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಈ ವರದಿಗೆ ತೆರಳಿದ ವರದಿಗಾರ್ತಿ ಅಖಿಲಾ ನಂದಕುಮಾರ್, ಮಹಾರಾಜಾ ಕಾಲೇಜಿನ ಅಕ್ರಮಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ನೇರ ಪ್ರಸಾರದ ಮೂಲಕ ಕಾಲೇಜಿನ ಪ್ರಾಂಶುಪಾಲರ ಪ್ರತಿಕ್ರಿಯೆ ಜೊತೆಗೆ ಇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಪ್ರತಿಕ್ರಿಯೆ ಪಡೆದಿದ್ದರು. ಈ ವೇಳೆ ಎಸ್ಎಫ್ಐ ಕಾರ್ಯದರ್ಶಿ ಆರ್ಶೂ ನಡೆಸಿರುವ ಮತ್ತೊಂದು ಅಕ್ರಮ ಬಯಲಿಗೆ ಬಂದಿದೆ. ಯಾವುದೇ ಪರೀಕ್ಷೆ ಬರೆಯದಿದ್ದರೂ ಅರ್ಶೂ ಅಂಕಪಟ್ಟಿಯಲ್ಲಿ ಎಲ್ಲಾ ವಿಷಯದಲ್ಲಿ ಪಾಸ್ ಎಂದು ನಮೂಜಿಸಲಾಗಿದೆ. ಈ ಅಕ್ರಮವೂ ಭಾರಿ ಸದ್ದು ಮಾಡಿತ್ತು. . ಆದರೆ ಸಿಪಿಐ ವಿದ್ಯಾರ್ಥಿ ಘಟಕವಾಗಿರುವ ಎಸ್ಎಫ್ಐ ವಿರುದ್ಧ ಸುದ್ದಿ ಮಾಡಿದ ಕಾರಣಕ್ಕೆ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. 
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more