ಅಕ್ರಮ ಬಯಲಿಗೆಳೆದ ವರದಿಗಾರ್ತಿ ಮೇಲೆ ಪ್ರಕರಣ: ಪತ್ರಕರ್ತರಿಂದ ಕೇರಳದಲ್ಲಿ ಪ್ರತಿಭಟನೆ

ಅಕ್ರಮ ಬಯಲಿಗೆಳೆದ ವರದಿಗಾರ್ತಿ ಮೇಲೆ ಪ್ರಕರಣ: ಪತ್ರಕರ್ತರಿಂದ ಕೇರಳದಲ್ಲಿ ಪ್ರತಿಭಟನೆ

Published : Jun 12, 2023, 01:25 PM IST

ಮಹಾರಾಜ್ ಕಾಲೇಜಿನಲ್ಲಿ ನಡೆದಿರುವ ಅಥಿತಿ ಉಪನ್ಯಾಸಕರ ನೇಮಕಾತಿಯಲ್ಲಿ ಮಾರ್ಕ್‌ಶೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಬಿಟ್ಟು ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ನ್ಯೂಸ್ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮಹಾರಾಜ್ ಕಾಲೇಜಿನಲ್ಲಿ ನಡೆದಿರುವ ಅಥಿತಿ ಉಪನ್ಯಾಸಕರ ನೇಮಕಾತಿಯಲ್ಲಿ ಮಾರ್ಕ್‌ಶೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಬಿಟ್ಟು ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ನ್ಯೂಸ್ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಹಲವು ರಾಜಕೀಯ ಮುಖಂಡರು ಹಾಗೂ ಪತ್ರಕರ್ತರ ಸಂಘಟನೆ  ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನೆ ಖಂಡಿಸಿ ಇಂದು ಪತ್ರಕರ್ತರು ಕೇರಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. 

ಎರ್ನಾಕುಲಂ ಮಹಾರಾಜಾ ಕಾಲೇಜಿನಲ್ಲಿ ನಡೆದಿರುವ ಅತಿಥಿ ಉಪನ್ಯಾಸಕರ ನೇಮಕ ಅಕ್ರಮ ಕುರಿತು ಏಷ್ಯಾನೆಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಈ ವರದಿಗೆ ತೆರಳಿದ ವರದಿಗಾರ್ತಿ ಅಖಿಲಾ ನಂದಕುಮಾರ್, ಮಹಾರಾಜಾ ಕಾಲೇಜಿನ ಅಕ್ರಮಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ನೇರ ಪ್ರಸಾರದ ಮೂಲಕ ಕಾಲೇಜಿನ ಪ್ರಾಂಶುಪಾಲರ ಪ್ರತಿಕ್ರಿಯೆ ಜೊತೆಗೆ ಇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಪ್ರತಿಕ್ರಿಯೆ ಪಡೆದಿದ್ದರು. ಈ ವೇಳೆ ಎಸ್ಎಫ್ಐ ಕಾರ್ಯದರ್ಶಿ ಆರ್ಶೂ ನಡೆಸಿರುವ ಮತ್ತೊಂದು ಅಕ್ರಮ ಬಯಲಿಗೆ ಬಂದಿದೆ. ಯಾವುದೇ ಪರೀಕ್ಷೆ ಬರೆಯದಿದ್ದರೂ ಅರ್ಶೂ ಅಂಕಪಟ್ಟಿಯಲ್ಲಿ ಎಲ್ಲಾ ವಿಷಯದಲ್ಲಿ ಪಾಸ್ ಎಂದು ನಮೂಜಿಸಲಾಗಿದೆ. ಈ ಅಕ್ರಮವೂ ಭಾರಿ ಸದ್ದು ಮಾಡಿತ್ತು. . ಆದರೆ ಸಿಪಿಐ ವಿದ್ಯಾರ್ಥಿ ಘಟಕವಾಗಿರುವ ಎಸ್ಎಫ್ಐ ವಿರುದ್ಧ ಸುದ್ದಿ ಮಾಡಿದ ಕಾರಣಕ್ಕೆ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. 
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more