ಅಕ್ರಮ ಬಯಲಿಗೆಳೆದ ವರದಿಗಾರ್ತಿ ಮೇಲೆ ಪ್ರಕರಣ: ಪತ್ರಕರ್ತರಿಂದ ಕೇರಳದಲ್ಲಿ ಪ್ರತಿಭಟನೆ

ಅಕ್ರಮ ಬಯಲಿಗೆಳೆದ ವರದಿಗಾರ್ತಿ ಮೇಲೆ ಪ್ರಕರಣ: ಪತ್ರಕರ್ತರಿಂದ ಕೇರಳದಲ್ಲಿ ಪ್ರತಿಭಟನೆ

Published : Jun 12, 2023, 01:25 PM IST

ಮಹಾರಾಜ್ ಕಾಲೇಜಿನಲ್ಲಿ ನಡೆದಿರುವ ಅಥಿತಿ ಉಪನ್ಯಾಸಕರ ನೇಮಕಾತಿಯಲ್ಲಿ ಮಾರ್ಕ್‌ಶೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಬಿಟ್ಟು ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ನ್ಯೂಸ್ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮಹಾರಾಜ್ ಕಾಲೇಜಿನಲ್ಲಿ ನಡೆದಿರುವ ಅಥಿತಿ ಉಪನ್ಯಾಸಕರ ನೇಮಕಾತಿಯಲ್ಲಿ ಮಾರ್ಕ್‌ಶೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಬಿಟ್ಟು ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ನ್ಯೂಸ್ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಹಲವು ರಾಜಕೀಯ ಮುಖಂಡರು ಹಾಗೂ ಪತ್ರಕರ್ತರ ಸಂಘಟನೆ  ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನೆ ಖಂಡಿಸಿ ಇಂದು ಪತ್ರಕರ್ತರು ಕೇರಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. 

ಎರ್ನಾಕುಲಂ ಮಹಾರಾಜಾ ಕಾಲೇಜಿನಲ್ಲಿ ನಡೆದಿರುವ ಅತಿಥಿ ಉಪನ್ಯಾಸಕರ ನೇಮಕ ಅಕ್ರಮ ಕುರಿತು ಏಷ್ಯಾನೆಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಈ ವರದಿಗೆ ತೆರಳಿದ ವರದಿಗಾರ್ತಿ ಅಖಿಲಾ ನಂದಕುಮಾರ್, ಮಹಾರಾಜಾ ಕಾಲೇಜಿನ ಅಕ್ರಮಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ನೇರ ಪ್ರಸಾರದ ಮೂಲಕ ಕಾಲೇಜಿನ ಪ್ರಾಂಶುಪಾಲರ ಪ್ರತಿಕ್ರಿಯೆ ಜೊತೆಗೆ ಇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಪ್ರತಿಕ್ರಿಯೆ ಪಡೆದಿದ್ದರು. ಈ ವೇಳೆ ಎಸ್ಎಫ್ಐ ಕಾರ್ಯದರ್ಶಿ ಆರ್ಶೂ ನಡೆಸಿರುವ ಮತ್ತೊಂದು ಅಕ್ರಮ ಬಯಲಿಗೆ ಬಂದಿದೆ. ಯಾವುದೇ ಪರೀಕ್ಷೆ ಬರೆಯದಿದ್ದರೂ ಅರ್ಶೂ ಅಂಕಪಟ್ಟಿಯಲ್ಲಿ ಎಲ್ಲಾ ವಿಷಯದಲ್ಲಿ ಪಾಸ್ ಎಂದು ನಮೂಜಿಸಲಾಗಿದೆ. ಈ ಅಕ್ರಮವೂ ಭಾರಿ ಸದ್ದು ಮಾಡಿತ್ತು. . ಆದರೆ ಸಿಪಿಐ ವಿದ್ಯಾರ್ಥಿ ಘಟಕವಾಗಿರುವ ಎಸ್ಎಫ್ಐ ವಿರುದ್ಧ ಸುದ್ದಿ ಮಾಡಿದ ಕಾರಣಕ್ಕೆ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more