Dec 20, 2023, 10:42 PM IST
ಮಲ್ಲಿಕಾರ್ಜುನ ಖರ್ಗೆ ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಅನ್ನೋ ಪ್ರಸ್ತಾಪ ಇದೀಗ ಕೋಲಾಹಲ ಸೃಷ್ಟಿಸಿದೆ. ಇದು ರಾಹುಲ್ ಗಾಂಧಿಯನ್ನು ಹಣಿಯುವ ತಂತ್ರ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ 12 ಪಕ್ಷಗಳು ಖರ್ಗೆ ಪ್ರಧಾನಿ ಅಭ್ಯರ್ಥಿಗೆ ಸಹಮತ ವ್ಯಕ್ತಪಡಿಸಿದೆ. ಇನ್ನುಳಿದ ಪಕ್ಷಗಳ ನಾಯಕರ ಮೌನಕ್ಕೆ ಜಾರಿದ್ದಾರೆ. ಪ್ರಮುಖವಾಗಿ ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ ಈ ಪ್ರಸ್ತಾವ ವಿರೋಧಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಆದರೆ ಈ ಪ್ರಸ್ತಾವನ್ನು ರಾಜ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ. ಇದರ ಬೆನ್ನಲ್ಲೇ ಖರ್ಗೆ ಕಲಬುರಗಿ ಕ್ಷೇತ್ರ ತೊರೆದು ಉತ್ತರ ಪ್ರದೇಶದ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ಲಾನ್ ನಡೆಯುತ್ತಿದೆ ಅನ್ನೋ ಮಾತು ಬಲವಾಗಿ ಕೇಳಿಬರುತ್ತಿದೆ.