ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

Suvarna News   | Asianet News
Published : Jun 19, 2020, 11:20 AM ISTUpdated : Jun 19, 2020, 11:30 AM IST

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದೆ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು(ಜೂ.19) ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜೂ.19): ಗಡಿಯಲ್ಲಿ ಯುದ್ಧದ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವೆ ಸೇನಾಧಿಕಾರಿಗಳ ಶಾಂತಿ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಶುಕ್ರವಾರ(ಜೂ.19) ನಡೆಯುವ ಸರ್ವಪಕ್ಷಗಳ ಸಭೆ ಕುತೂಹಲ ಮೂಡಿಸಿದೆ.

ಪೂರ್ವ ಲಡಾಖ್‌ನ ಗಲ್ವಾನ್ ಪ್ರದೇಶದಲ್ಲಿ ಚೀನಿ ಸೈನಿಕರು ನಿರಾಯುಧ ಭಾರತೀಯ ಪಡೆಯ ಮೇಲೆ ಮುಗಿಬಿದ್ದು 20 ಯೋಧರನ್ನು ಹತ್ಯೆ ಮಾಡಿದೆ. ಗಡಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದೀಗ ಪ್ರಧಾನಿ ಮೋದಿ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಗಡಿ ಗಲಾಟೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳ ಬಗ್ಗೆ ಎಲ್ಲಾ ಪಕ್ಷಗಳ ಅಭಿಪ್ರಾಯ ಹಾಗೂ ಸಲಹೆಗಳನ್ನು ಮೋದಿ ಪಡೆಯಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!