ತೀವ್ರಗೊಂಡ ರೈತ ಹೋರಾಟ; ಹರ್ಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಜೊತೆ ಏಷ್ಯಾನೆಟ್ ಸುವರ್ಣ ನ್ಯೂಸ್

Dec 3, 2020, 10:35 AM IST

ಬೆಂಗಳೂರು (ಡಿ. 03): ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಹರ್ಯಾಣ ಹಾಗೂ ಪಂಜಾಬ್ ರೈತರು ನಡೆಸುತ್ತಿರುವ ಪ್ರತಿಭಟನೆ 1 ವಾರ ಪೂರೈಸಿದೆ. ರಾಜಸ್ಥಾನ, ಉತ್ತರ ಪ್ರದೇಶದಿಂದ ಇನ್ನಷ್ಟು ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ಇನ್ನಷ್ಟು ಬಲ ಬಂದಂತಾಗಿದೆ.

ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿ ಹಾಗೂ ಹರ್ಯಾಣ ನಡುವಿನ ಗಡಿ ಭಾಗದಲ್ಲಿ ರಸ್ತೆಯನ್ನು ಬ್ಲಾಕ್ ಮಾಡಲಾಗಿದೆ. ಸ್ಥಳದಿಂದಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡಿದೆ. ಯಾವ ರೀತಿಯಲ್ಲಿ ಪ್ರತಿಭಟನೆ ಸಾಗುತ್ತಿದೆ? ನೋಡೋಣ ಬನ್ನಿ..!