ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡ?: ಕಮಾಂಡರ್‌ಗಳಿಗೆ ಸೂಚನೆ!

Aug 8, 2020, 10:09 AM IST

ನವದೆಹಲಿ(ಆ.08) ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡವಿದೆಯಾ? ಇಂತಹುದ್ದೊಂದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಸೇನಾ ಮುಖ್ಯಸ್ಥ ಎಂ. ಎಂ. ನರವಣೆ ಸೇನಾ ಕಮಾಂಡರ್‌ಗಳಿಗೆ ನೀಡಿರುವ ಸೂಚನೆ.

ಹೌದು ಯಾವುದೇ ಸಂದರ್ಭದಲ್ಲೂ ಯುದ್ಧ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ ಎಂದು ಸೇನಾ ಮುಖ್ಯಸ್ಥರು ಪೂರ್ವ, ಪಶ್ಚಿಮ ಹಾಗೂ ಉತ್ತರ ಕಮಾಂಡರ್‌ಗಳಿಗೆ ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೇನಾ ಮುಖ್ಯರ್ಸತರು ಆದೇಶಿಸಿದ್ದಾರೆ.